ಆರ್ತತ್ರಾಣ
ಹವ್ಯಕ ಮಹಾಮಂಡಲದ ಅರ್ಹ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ: ವಿವಿಧ ಮಂಡಲಗಳಲ್ಲಿ ಚೆಕ್ ವಿತರಣೆ
ವಿದ್ಯಾಭ್ಯಾಸ ನಡೆಸಲು ಆರ್ಥಿಕ ತೊಂದರೆ ಎದುರಿಸುತ್ತಿರುವ ಶ್ರೀಮಠದ ಶಿಷ್ಯರ ಪ್ರತಿಭಾವಂತ ಮಕ್ಕಳ ವಿದ್ಯಾಭ್ಯಾಸಕ್ಕೆ ಶ್ರೀ ರಾಮಚಂದ್ರಾಪುರ ಮಠ ಪ್ರತಿ ವರ್ಷದಂತೆ ಈ ವರ್ಷವೂ, 2018-19 ನೇ ಸಾಲಿನ ಅರ್ಹ 221 ವಿದ್ಯಾರ್ಥಿಗಳಿಗೆ ಮೊದಲ ಹಂತದಲ್ಲಿ ₹9,36,000ಗಳನ್ನು ಮಂಜೂರುಗೊಳಿಸಿದೆ. ದಿನಾಂಕ 11.11.2018ನೆಯ ಭಾನುವಾರದಂದು ಮಹಾಮಂಡಲದ ಏಳು ಮಂಡಲಗಳಲ್ಲಿ ಆರ್ಥಿಕ ಸಹಾಯಧನವನ್ನು ಚೆಕ್ ಮೂಲಕ ವಿತರಣೆ ಮಾಡಲಾಯಿತು. ಕುಮಟಾ, ಹೊನ್ನಾವರ, ಮಂಗಳೂರು, ಉಪ್ಪಿನಂಗಡಿ, ಮುಳ್ಳೇರಿಯ, ಉತ್ತರ ಬೆಂಗಳೂರು, ದಕ್ಷಿಣ ಬೆಂಗಳೂರು ಮಂಡಲಗಳ ಒಟ್ಟು 173 ವಿದ್ಯಾರ್ಥಿಗಳಿಗೆ ₹6,70,000ಗಳ ಸಹಾಯಧನ
Read Moreಹವ್ಯಕ ಮಂಡಲ ಕುಮಟ ವತಿಯಿಂದ ವಿದ್ಯಾರ್ಥಿಗಳಿಗೆ ಚೆಕ್ ವಿತರಣೆ
ಕುಮಟಾ: ಕುಮಟಾ ಹವ್ಯಕ ಮಂಡಲದ ವತಿಯಿಂದ ಅಗತ್ಯವಿರುವ ವಿದ್ಯಾರ್ಥಿಗಳಿಗೆ ವಿದ್ಯಾ ಸಹಾಯ ಯೋಜನೆಯ ಚೆಕ್ ವಿತರಣೆ ಕಾರ್ಯಕ್ರಮವು ನಡೆಯಿತು. ಕೆಕ್ಕಾರಿನ ಶ್ರೀ ರಘೋತ್ತಮ ಮಠದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಶ್ರೀ ಗಣೇಶ ಹೆಗಡೆ ಪ್ರಾಸ್ತಾವಿಕವಾಗಿ ಶ್ರೀಪೀಠದ ಶಿಷ್ಯಕಳಕಳಿ, ಭಕ್ತವಾತ್ಸಲ್ಯ, ಸಮಾಜ ಮುಖಿ ಕಾರ್ಯಕ್ರಮಗಳ ಕುರಿತು ಮಾತನಾಡಿದರು. ಬಳಿಕ ಮಂಡಲದ ಅಧ್ಯಕ್ಷರಾದ ಶ್ರೀ ಮಂಜುನಾಥ ಸುವರ್ಣಗದ್ದೆ ಇವರು ಮಾತನಾಡಿ, ವಿದ್ಯಾ ಸಹಾಯವು ಸಮಾಜ ನಿಮ್ಮೊಂದಿಗಿದೆ ಎಂಬುದರ ಸಂಕೇತವಾಗಿದೆ ಎಂದರು. ಇದರೊಂದಿಗೆ ವಿದ್ಯಾರ್ಥಿಗಳ ಭ್ರಮಾಲೋಕ, ಹವ್ಯಕರ ಸಂಖ್ಯೆಯ ಕಳವಳಕಾರಿ ಸ್ಥಿತಿ,
Read Moreಶ್ರೀಸಂಸ್ಥಾನದವರಿಂದ ವಿದ್ಯಾ ಸಹಾಯ ಸ್ವೀಕರಿಸಿದ ವಿದ್ಯಾರ್ಥಿಗಳು
ಬೆಂಗಳೂರು: ಬೆಂಗಳೂರು ಉತ್ತರ ಮತ್ತು ದಕ್ಷಿಣ ಮಂಡಲದ ಮೂರು ವಿದ್ಯಾರ್ಥಿಗಳು ಇಂದು ವಿದ್ಯಾ ಸಹಾಯವನ್ನು ಶ್ರೀಸಂಸ್ಥಾನದವರ ಅಮೃತ ಕರಕಮಲಗಳಿಂದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ದಕ್ಷಿಣ ಬೆಂಗಳೂರು ಮಂಡಲದ ಅಧ್ಯಕ್ಷರಾದ ಶ್ರೀ ವೈ.ಕೆ.ಎನ್. ಶರ್ಮ, ಕಾರ್ಯದರ್ಶಿಗಳಾದ ಶ್ರೀ ಶ್ರೀಕಾಂತ ಹೆಗಡೆ ಅಂತರವಳ್ಳಿ, ವಿದ್ಯಾರ್ಥಿವಾಹಿನೀ ಪ್ರಧಾನ ಶ್ರೀಮತಿ ಅಶ್ವಿನಿ ಅರವಿಂದ, ಉತ್ತರ ಬೆಂಗಳೂರು ಮಂಡಲದ ವಿದ್ಯಾರ್ಥಿವಾಹಿನೀ ಪ್ರಧಾನ ಶ್ರೀಮತಿ ಸಂಧ್ಯಾ ಕಾನತ್ತೂರು ಉಪಸ್ಥಿತರಿದ್ದರು. ವಿದ್ಯಾಸಹಾಯ ವಿತರಣೆಗೂ ಮುನ್ನ, ಮಹಾಮಂಡಲದ ಸೂಚನೆಯಂತೆ ವಿದ್ಯಾರ್ಥಿಗಳಿಗೆ ಶ್ರೀಮಠದ ಪರಿಚಯ, ವಿದ್ಯಾರ್ಥಿಗಳಿಗಿರುವ ಸೇವಾವಕಾಶ, ಇರಬೇಕಾದ ಬದ್ಧತೆ,
Read More