|| ಶ್ರೀರಾಮಚಂದ್ರಾಪುರ ಮಠದ ಯೋಚನೆ-ಯೋಜನೆ-ಕಾರ್ಯ-ಕಾರ್ಯಕ್ರಮಗಳ ಸಮಗ್ರ ದರ್ಶನ ||
Menu

ಅಕ್ಷಯ ತೃತೀಯೆಯ ಶುಭ ದಿನದಂದು ಸುವರ್ಣ ನಾಣ್ಯಾಭಿಷೇಕ

ಸಂಸ್ಥಾನ ಶ್ರೀಮಹಾಬಲೇಶ್ವರ ದೇವಾಲಯದಲ್ಲಿ ಅಕ್ಷಯ ತೃತೀಯೆಯ ಶುಭ ದಿನದಂದು ಲೋಕಕಲ್ಯಾಣದ ಸಂಕಲ್ಪದಿಂದ ಪರಮಪೂಜ್ಯ ಜಗದ್ಗುರುಶಂಕರಾಚಾರ್ಯ ಗೋಕರ್ಣ ಮಂಡಲಾಧೀಶ್ವರ ಶ್ರೀಶ್ರೀರಾಘವೇಶ್ವರಭಾರತೀಮಹಾಸ್ವಾಮಿಗಳವರ ಮಾರ್ಗದರ್ಶನದಂತೆ ಸುವರ್ಣ ನಾಣ್ಯಾಭಿಷೇಕ ಮಾಡಲಾಯಿತು. ಶ್ರೀಕ್ಷೇತ್ರ ಗೋಕರ್ಣದ ಉಪಾಧಿವಂತ ಮಂಡಲದವರು ಶತರುದ್ರ ಹೋಮವನ್ನು ನೆರೆವೇರಿಸಿದರು. ವೇ. ವಿ. ಸಾಂಬಾ ಭಟ್ ಷಡಕ್ಷರಿ ಪೂಜಾ ಕೈಂಕರ್ಯ ನೆರವೇರಿಸಿದರು. ಜಗತ್ತಿಗೆ ಬಂದ ಅತ್ಯಂತ ಹೆಮ್ಮಾರಿ ರೋಗವಾದ ಕರೋನಾ ನಿವಾರಣೆಯಾಗಲೆಂದು ಜಗದೀಶ್ವರನಲ್ಲಿ ಪ್ರಾರ್ಥಿಸಿಲಾಯಿತು.