ಗೋಶಾಲಾ
ಶನಿನಮನ – ತಾಪಶಮನ: ಶನಿಜಯಂತೀ ವಿಶೇಷ ಕಾರ್ಯಕ್ರಮ
ಪೆರ್ಲ: ಬಜಕ್ಕೂಡ್ಲಿನ ಅಮೃತಧಾರಾ ಗೋಶಾಲೆಯಲ್ಲಿ ವೈಶಾಖ ಅಮಾವಾಸ್ಯೆಯಂದು (16-05-2026) ‘ಶನಿನಮನ -ತಾಪಶಮನ’ ವಿಶೇಷ ಕಾರ್ಯಕ್ರಮ ಸಂಪನ್ನಗೊಂಡಿತು. ಅಮಾವಾಸ್ಯೆ-ಶನಿವಾರಗಳ ಸಂಗಮವಾದ ಈ ಶನಿಜಯಂತಿಯ ಕಾಲ ಅಪರೂಪದಲ್ಲಿ ಅಪರೂಪ. ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಮಾರ್ಗದರ್ಶನ-ಆಶೀರ್ವಾದಗಳೊಂದಿಗೆ ಶನೈಶ್ಚರನ ಈ ಮಹೋಪಾಸನೆ ನೆರವೇರಿತು. ಗುರುವಂದನೆಯೊಂದಿಗೆ ಆರಂಭಗೊಂಡು ಸ್ವಸ್ತಿ ಪುಣ್ಯಾಹ, ಬಾಲಗಣಪತಿ ಹವನ ನಡೆದವು. ಬೆಳಗ್ಗೆ 6:06 ಗಂಟೆಯಿಂದ ಗಣಪತಿ ಅಥರ್ವಶಿರ್ಷ ಪಾರಾಯಣ ಪ್ರಾರಂಭಗೊಂಡಿತು. 24 ಗಂಟೆಗಳ ನಿರಂತರ ಪಾರಾಯಣ ಮರುದಿನದ ಬೆಳಗ್ಗೆ ಸೂರ್ಯೋದಯಕ್ಕೆ ಸಮಾಪನಗೊಂಡಿತು. ಗಣಪತಿ ಅಥರ್ವಶೀರ್ಷ ಹವನ, ಶನಿ
Read Moreಆಲೆಮನೆಯ ಆನಂದದ ಅಲೆ
ಕುಮಟ: ಹೊಸಾಡದ ಭಾರತೀಯ ಗೋ ಬ್ಯಾಂಕ್ ಗೋಶಾಲೆಯಲ್ಲಿ ಕಾಮಧೇನುವಿನ ಸನ್ನಿಧಿಯಲ್ಲಿ ಕಾಮಧೇನು ಹವನ ಮುಂತಾದ ಕಾರ್ಯಕ್ರಮಗಳೊಂದಿಗೆ ಆಲೆಮನೆ ಹಬ್ಬ ನಾಲ್ಕು ದಿವಸಗಳ ಕಾಲ ನಡೆಯಿತು. ಈ ಕಾರ್ಯಕ್ರಮವು 19-02-2026 ರಂದು ಆರಂಭವಾಯಿತು. ಇದರ ಅಂಗವಾಗಿ ಉಪಾಸನಾ ಕಾರ್ಯಕ್ರಮಗಳು ಆರಂಭವಾದುವು. ಅನೇಕರು ಕಾಮಧೇನುವಿನ ಸನ್ನಿಧಿಯಲ್ಲಿ ವಿವಿಧ ಪೂಜೆಗಳನ್ನು ಸಲ್ಲಿಸಿದರು. ಪ್ರಥಮ ದಿನದಂದು ವಿಶೇಷವಾಗಿ ವೈದಿಕ ಸಮಾವೇಶ ಕಾರ್ಯಕ್ರಮವು ಜರುಗಿತು. ವೈದಿಕರಿಂದ ದೀಪ ಬೆಳಗುವುದರೊಂದಿಗೆ ಆಲೆಮನೆ ಹಬ್ಬದ ಮೊದಲ ದಿನದ ಸಭಾ ಕಾರ್ಯಕ್ರಮ ಶುಭಾರಂಭಗೊಂಡಿತು. ಸಭಾ ಕಾರ್ಯಕ್ರಮದ ಅನಂತರ
Read Moreಗೋವೆಂಬ ದೀಪಕ್ಕಿದೋ ದೀಪೋತ್ಸವ ಸೇವೆ
ಕೈರಂಗಳ: ಪುಣ್ಯಕೋಟಿನಗರದ ಅಮೃತಧಾರಾ ಗೋಶಾಲೆಯಲ್ಲಿ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ದಿವ್ಯ ಮಾರ್ಗದರ್ಶನದಲ್ಲಿ ನಡೆದ ಗೋಸೇವಾ ಮಾಸಾಚರಣೆ ಕಾರ್ಯಕ್ರಮದ ಸಮಾರೋಪ ಮಾಘ ಕೃಷ್ಣ ದಶಮಿಯಂದು (ಫೆಬ್ರವರಿ 12) ನಡೆಯಿತು. ಆ ದಿನ ರಾತ್ರಿ 8:00 ಘಂಟೆಯಿಂದ ಗೋಮಾಸಾಚರಣೆಯ ಮಂಗಲ ಮಹೋತ್ಸವರೂಪವಾದಂತಹ ‘ದೀಪೋತ್ಸವ’ ಕಾರ್ಯಕ್ರಮವು ವಿಜೃಂಭಣೆಯಿಂದ ಜರುಗಿತು. ಮಕರ ಸಂಕ್ರಾಂತಿಯಂದು ಆರಂಭಗೊಂಡು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಈ ಕಾರ್ಯಕ್ರಮವು ಸಂಪನ್ನಗೊಂಡಿತು. ಈ ಸಂದರ್ಭದಲ್ಲಿ ವಿಶೇಷವಾಗಿ ಗೋ ಸೇವೆಯು ವೈಭವೋಪೇತವಾಗಿ, ಭಕ್ತಿ-ಶ್ರದ್ಧಾಪುರಃಸರವಾಗಿ ನಡೆಯಿತು. ಇಂತು ಗೋ ಸೇವಾ ಮಾಸಾಚರಣೆಯು ಯಶಸ್ವಿಗೊಂಡಿತು.
Read Moreಗೋಮಾತೆಯ ರಕ್ಷಣೆಯ ಸಂಕಲ್ಪದೊಂದಿಗೆ ಅಮೃತಧಾರೆ ಗೋಶಾಲೆಯಲ್ಲಿ ಗೋ ಸೇವಾ ಮಾಸಾಚರಣೆ
ಪುಣ್ಯಕೋಟಿ ನಗರ: ದೇಶೀ ಹಸುಗಳ ಸಂವರ್ಧನೆ, ಸಂರಕ್ಷಣೆ ಧ್ಯೇಯವಾಗಿರಿಸಿಕೊಂಡು ಗೋಶಾಲೆಗಳ ಮೇಲೆ ಕಿಡಿಗೇಡಿಗಳ ಆಕ್ರಮಣ ಹೆಚ್ಚುತ್ತಿದ್ದ ಸಂದರ್ಭದಲ್ಲಿ, ಗೋ ರಕ್ಷಣೆಯ ದೀಕ್ಷಾಕಂಕಣ ತೊಟ್ಟು ಅಹರ್ನಿಶಿ ಸತ್ಯಾಗ್ರಹ ನಡೆಸಿ ಮಾಡಿದ ಚಳುವಳಿಯ ಸ್ಪೂರ್ತಿಯ ಹಿನ್ನೆಲೆಯಲ್ಲಿ ಗೋವಿನ ರಕ್ಷಣೆಯ ಸಂಕಲ್ಪದೊಂದಿಗೆ ಗೋವಿನೊಂದಿಗಿರುವ ನಿಕಟ ಸಂಬಂಧವನ್ನು ಸಾರ್ವತ್ರಿಕಗೊಳಿಸಲು ಹಮ್ಮಿಕೊಳ್ಳಲಾಗಿರುವ ಗೋ ಸೇವಾ ಮಾಸಾಚರಣೆಯು ದಕ್ಷಿಣ ಕನ್ನಡ ಜಿಲ್ಲೆಯ ಕೈರಂಗಳ ಪುಣ್ಯಕೋಟಿ ನಗರದ ಅಮೃತಧಾರಾ ಗೋಶಾಲೆಯಲ್ಲಿ 14-01-2026 ಬುಧವಾರ ಸಂಜೆ 5.00 ಗಂಟೆಗೆ ಸಾಮಾಜಿಕ, ಸಾಂಸ್ಕೃತಿಕ ಕ್ಷೇತ್ರಗಳ ಗಣ್ಯರ ಉಪಸ್ಥಿತಿಯಲ್ಲಿ ಉದ್ಘಾಟನೆಗೊಳ್ಳಲಿದೆ. ಫೆ.
Read Moreಬಜಕೂಡ್ಲು ಅಮೃತಧಾರಾ ಗೋಶಾಲೆಗೆ ಶ್ರೀಮಠದ ಪದಾಧಿಕಾರಿಗಳು ಭೇಟಿ
ಪೆರ್ಲ: ಎಣ್ಮಕಜೆ ವಲಯದ ಬಜಕೂಡ್ಲು ಅಮೃತಧಾರಾ ಗೋಶಾಲೆಗೆ ಶ್ರೀರಾಮಚಂದ್ರಾಪುರ ಮಠದ ಪದಾಧಿಕಾರಿಗಳು ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದರು. ಶ್ರೀರಾಮಚಂದ್ರಾಪುರ ಮಠದ ಪ್ರಶಾಸನಾಧಿಕಾರಿ ಸಂತೋಷ ಹೆಗಡೆ, ವಿತ್ತಾಧ್ಯಕ್ಷ ಗಣೇಶ ಜೆಡ್ಡಿನಮನೆ, ಸುಶಾಸನ ಖಂಡದ ಶ್ರೀಸಂಯೋಜಕ ಪ್ರವೀಣ ಭೀಮನಕೋಣೆ ಭೇಟಿ ನೀಡಿ, ಪ್ರಗತಿಯನ್ನು ವೀಕ್ಷಿಸಿ ಮಾರ್ಗದರ್ಶನ ಮಾಡಿದರು. ಗೋಶಾಲೆಯ ಅಧ್ಯಕ್ಷರಾದ ಜಗದೀಶ ಗೋಳಿತ್ತಡ್ಕ, ಕಾರ್ಯದರ್ಶಿ ಕೃಷ್ಣ ಪ್ರಸಾದ್ ಬನಾರಿ, ಕೋಶಾಧಿಕಾರಿ ಶ್ರೀಧರ ಭಟ್ ತೆಂಕಮಾಣಿಪ್ಪಾಡಿ ಜೊತೆಗಿದ್ದರು.
Read Moreಗೋ ಸಹಿತ ಬದುಕು ಬದುಕಬೇಕು- ಶ್ರೀಸಂಸ್ಥಾನ
ಗೋವು ಶೂನ್ಯ ಬದುಕು ನಮ್ಮದಾಗಬಾರದು. ಗೋ ಸಹಿತ ಬದುಕು ಬದುಕಬೇಕು ಎಂದು ಶ್ರೀಸಂಸ್ಥಾನ ಗೋಕರ್ಣ ಶ್ರೀರಾಮಚಂದ್ರಾಪುರ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಹೇಳಿದರು. ಅವರು ಗೋಸ್ವರ್ಗದಲ್ಲಿ ಕಾಮದುಘಾ ಟ್ರಸ್ಟ್ ಹಾಗೂ ಮುಂಬಯಿ ದಿನೇಶ್ ಶಹರಾ ಪೌಂಡೇಶನ್ ಆಶ್ರಯದಲ್ಲಿ ಅನುಪಮ ಗೋಸೇವಕರಿಗಾಗಿ ನೀಡಲ್ಪಡುವ ರಾಜ್ಯ ಮಟ್ಟದ ಗೋಪಾಲ ಗೌರವ ಪ್ರಶಸ್ತಿ ಪ್ರಧಾನ ಮಾಡಿ ಆಶೀರ್ವಚನ ನೀಡಿದರು. ಪ್ರಶಸ್ತಿ ಪ್ರಧಾನ ಮಾಡಿದ ಮುಂಬಯಿ ದಿನೇಶ್ ಶಹರಾ ಪೌಂಡೇಶನ್ ಮುಖ್ಯಸ್ಥ ದಿನೇಶ್ ಶಹರಾ ಮಾತನಾಡಿ ಗೋವುಗಳು ಕುರಿತು ತಳುವಳಿಕೆ
Read Moreಮಾತೃತ್ವಮ್ ಸಂಘಟನೆಯಿಂದ ಮೇವು ಸಮರ್ಪಣೆ
ಮಾಲೂರು: ಮುಂದಿನ ಪೀಳಿಗೆಗಾಗಿ ಗೋವಿಗಳನ್ನು ಉಳಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಮಾತೆಯರೆಲ್ಲರೂ ಗೋಸೇವೆಗೆ ಮುಂದಾದಾಗ ಎಲ್ಲಾ ಗೋಶಾಲೆಗಳು ಸಮೃದ್ಧತೆಯಿಂದ ಕೂಡಿರುತ್ತದೆ ಎಂದು ಮಾತೃತ್ವಮ್ ನ ಕೇಂದ್ರ ಕಾರ್ಯದರ್ಶಿ ನಾಗರತ್ನ ಜಿ. ಶರ್ಮ ಹೇಳಿದರು. ಅವರು ಮಾಲೂರು ಗಂಗಾಪುರದ ಶ್ರೀ ರಾಘವೇಂದ್ರ ಗೋಆಶ್ರಮಕ್ಕೆ ಗೋವಿಗಾಗಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ಮಾತೃತ್ವಮ್ ಸಂಘಟನೆಯ ಮಾಸದ ಮಾತೆಯರು ಆಗಮಿಸಿ ಮೇವು ಸಮರ್ಪಣೆ ಮಾಡಿದ ಬಳಿಕ ಮಾತನಾಡಿದರು. ಗೋಆಶ್ರಮ ಸಮಿತಿ ಅಧ್ಯಕ್ಷ ಡಾ. ಶ್ಯಾಮಪ್ರಸಾದ ಮಾತನಾಡಿ ಬದುಕಿನಲ್ಲಿ
Read Moreಪೇಜಾವರ ಶ್ರೀ ಗೋಆಶ್ರಮಕ್ಕೆ ಭೇಟಿ
ಪೇಜಾವರ ಮಠಾಧೀಶರಾದ ಶ್ರೀ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದಂಗಳವರು ಮಾಲೂರು ಗಂಗಾಪುರದ ಶ್ರೀ ರಾಘವೇಂದ್ರ ಗೋಆಶ್ರಮಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಟೀಮ್ ಗೋಪಾಲ್ಸ್ ನವರು ಸಂಘಟಿಸಿದ ಗೋ ಸಂಗಮ ಕಾರ್ಯಕ್ರಮದಲ್ಲಿ ಭಾಗವಹಿಸಿ ಆಶೀರ್ವಚನ ನೀಡಿದ ಶ್ರೀಗಳವರು ‘ಜೀವನ ಪೂರ್ತಿ ಹಾಲು ನೀಡಿ ನಮ್ಮನ್ನು ಸಲಹುವ ಗೋಮಾತೆಯನ್ನು ರಕ್ಷಿಸುವುದು ನಮ್ಮ ಆದ್ಯ ಕರ್ತವ್ಯವಾಗಬೇಕು. ಪ್ರತಿದಿನ ನಾವು ಊಟ ಮಾಡುವ ಮೊದಲು ಗೋಗ್ರಾಸ ನೀಡಬೇಕು. ಇಂದಿನ ಜೀವನ ಶೈಲಿಯಲ್ಲಿ ಇದು ಸಮಸ್ಯೆಯಾದರೆ ಮನೆಯಲ್ಲಿ ಹುಂಡಿ ಇಟ್ಟು ಊಟದ ಮೊದಲು
Read Moreಮಾಲೂರು ಆಂಜನೇಯನ ವಿಗ್ರಹ ಬಾಲಾಲಯ
ಗಂಗಾಪುರ ಶ್ರೀ ರಾಘವೇಂದ್ರ ಗೋಆಶ್ರಮದಲ್ಲಿರುವ ಶ್ರೀ ಸಿದ್ಧಾಂಜನೇಯ ಸ್ವಾಮಿ ನೂತನ ಮಂದಿರ ನಿರ್ಮಾಣದ ಅಂಗವಾಗಿ ಗೋಕರ್ಣ ಪರಮೇಶ್ವರ ಭಟ್ಟ ಮಾರ್ಕಾಂಡೆ ಅವರ ನೇತೃತ್ವದಲ್ಲಿ ಕಲಾ ಸಂಕೋಚ ಹವನ, ಕಲಶಾಭಿಷೇಕ ನಡೆಸಿ, ಆಂಜನೇಯನ ವಿಗ್ರಹವನ್ನು ಬಾಲಾಲಯದಲ್ಲಿ ಸ್ಥಾಪಿಸಲಾಯಿತು. ಶ್ರೀಸಂಸ್ಥಾನ ಗೋಕರ್ಣ ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿಯವರ ದಿವ್ಯಅನುಗ್ರಹ ಮಾರ್ಗದರ್ಶನದಲ್ಲಿ ದೇವಸ್ಥಾನದ ಪುನರ್ ನಿರ್ಮಾಣ ಕಾರ್ಯವನ್ನು ಆರಂಭಿಸಲಾಗಿದೆ. ಗೋವಿಂದ ಭಟ್ ವಳಕ್ಕುಂಜ ದಂಪತಿಗಳು ವಿಧಿವಿಧಾನಗಳನ್ನು ನಡೆಸಿದರು. ಶೀಘ್ರವಾಗಿ ಮಂದಿರ ನಿರ್ಮಾಣ ಹಾಗೂ ಗೋವುಗಳ ಕ್ಷೇಮಕ್ಕಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಗೋಪ್ರೇಮಿಗಳಾದ
Read Moreಆಚಾರ್ಯಭವನ ಮತ್ತು ಪುಣ್ಯಕೋಟಿ ಗೋಸ್ವರ್ಗ ಲೋಕಾರ್ಪಣೆ
ಮುರ್ಡೇಶ್ವರದಲ್ಲಿ ನೂತನವಾಗಿ ನಿರ್ಮಿಸಿರುವ ಆಚಾರ್ಯಭವನ ಮತ್ತು ಪುಣ್ಯಕೋಟಿ ಗೋಸ್ವರ್ಗವನ್ನು ಶ್ರೀಗಳವರು ಲೋಕಾರ್ಪಣ ಗೊಳಿಸಿದರು. ಈ ಸಂದರ್ಭದಲ್ಲಿ ಶಾಸಕ ಸುನಿಲ್ ನಾಯ್ಕ್, ಮಾಜಿ ಶಾಸಕ ಮಂಕಾಳು ವೈದ್ಯ ಮತ್ತು ಕಟ್ಟಡದ ನಿರ್ಮಾತೃ ಬಲಸೆ ಕೃಷ್ಣಾನಂದಭಟ್ ಉಪಸ್ಥಿತರಿದ್ದರು.
Read Moreಬಲಿಪಾಡ್ಯಮಿ ಪ್ರಯುಕ್ತ ಗೋ ಪೂಜಾ ಕಾರ್ಯಕ್ರಮ
ಅಮೃತಧಾರಾ ಗೋಶಾಲೆ ಹೊಸಾಡು ಕುಮಟಾದಲ್ಲಿ ಬಲಿಪಾಡ್ಯಮಿ ಪ್ರಯುಕ್ತ ಗೋ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ನೂರಾರು ಗೋಬಂಧುಗಳು ಕುಟುಂಬ ಸಮೇತಗೋ ಶಾಲೆಗೆ ಆಗಮಿಸಿ ಗೋವುಗಳಿಗೆ ಗೋಗ್ರಾಸ ನೀಡಿ ಧನ್ಯರಾದರು. ಜೊತೆಗೆ ಗೋಪೂಜೆ ಕಾಮಧೇನು ಪೂಜೆಯನ್ನು ನೆರವೇರಿಸಲಾಯಿತು. ಲಾಸಾ ಫೌಂಡೇಶನ್ ಮುಂಬಯಿ ನಿರ್ದೇಶಕರಾದ ಶಿವಾನಂದ ಹೆಗಡೆಯವರು ಕುಟುಂಬ ಸಮೇತ ಉಪಸ್ಥಿತರಿದ್ದು ಗೋ ಕುಟುಂಬದೊಡನೆ ಒಡನಾಡಿದರು. ಕಾಮಧೇನು ಪೂಜೆಯಲ್ಲಿ ಭಾಗವಹಿಸಿ ಪುಣ್ಯ ಭಾಜನರಾದರು. ಗೋಶಾಲೆಯ ಸ್ವಚ್ಛತೆ, ಆಹಾರ ಪೂರೈಕೆ. ವಿತರಿಸುವ ವಿಧಾನ ಇತ್ಯಾದಿಗಳನ್ನು ಗಮನಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಲಾಸ ಫೌಂಡೇಶನ್ ಮುಂಬೈ
Read Moreಗೋಗ್ರಾಸ ಸೇವೆ
ಮಾಣಿ ಮಠದ ಗೋಶಾಲೆಗೆ ದರ್ಬೆವಲಯ ಮುಕ್ರಂಪಾಡಿಯ ಮಧುರಕಾನ ಗಣಪತಿ ಭಟ್ಟರಿಂದ ೧,೬೦೦ ಸೂಡಿ ಬೈಹುಲ್ಲು ಕೊಡುಗೆಯಾಗಿ ನೀಡುವ ಮೂಲಕ ದೀಪಾವಳಿ ಗೋಪೂಜೆ ಯನ್ನು ಗೋಗ್ರಾಸದ ಸೇವೆಯೊಂದಿಗೆ ಅನ್ವರ್ಥವಾಗಿ ಆಚರಿಸಿದರು.
Read More೨೫ ವರ್ಷದ ಗೋವಿನ ಜತೆ ಮಹಾ ದಾನಿ
ಜೇಡ್ಲ ಗೋಶಾಲೆಯ ಜಾಗ ಹಾಗೂ ಐವತ್ತು ಮಲೆನಾಡು ಗಿಡ್ಡ ಗೋವುಗಳನ್ನು ಶ್ರೀಮಠಕ್ಕೆ ದಾನ ಮಾಡಿದ ಎನ್ ವೆಂಕಟರಾಮಯ್ಯ ಅವರು ೨೫ ವರ್ಷದ ಪಾರ್ವತಿ ಎನ್ನುವ ಗೋವಿಗೆ ಬೆಲ್ಲ ತಿನ್ನಿಸಿ ಸಂಭ್ರಮಿಸಿದರು.
Read Moreಸೇವಾ ಅರ್ಘ್ಯದೊಂದಿಗೆ ಹುಟ್ಟು ಹಬ್ಬದ ಆಚರಣೆ
ಪೆರಡಾಲ ವಲಯ ಮೀಸೆ ಬಯಲು ಘಟಕದ ಮಿಂಚಿನಡ್ಕ ರವೀಂದ್ರನಾಥ ಹಾಗೂ ವಿದ್ಯಾ ದಂಪತಿಯರು ಮಗ ಅನಘ ಶರ್ಮಾನ ಹುಟ್ಟು ಹಬ್ಬವನ್ನು ಗೋವಿಗಾಗಿ ಮೇವು-ಮೇವಿಗಾಗಿ ನಾವು ಸೇವಾ ಅರ್ಘ್ಯದ ನೇತೃತ್ವ ವಹಿಸುವುದರ ಮೂಲಕ ಆಚರಿಸಿದರು. ಹುಟ್ಟುಹಬ್ಬದಂದು ಸಾಮಾನ್ಯವಾಗಿ ಮಕ್ಕಳು ಹೊಸ ಉಡುಗೆ ತೊಟ್ಟು ಸಂಭ್ರಮಿದರೆ ಈ ಹುಡುಗನ ವೇಷವೇ ಬೇರೆ. ಹುಲ್ಲು ಕತ್ತರಿಸುವ ಯಂತ್ರವನ್ನು ಹೆಗಲಿಗೇರಿಸಿ ಸ್ವಯಂ ತಯಾರಿಸಿದ ರಕ್ಷಣಾ ಪೋಷಾಕು!!! ಅನಘ ಶರ್ಮಾನ ಉತ್ಸಾಹವನ್ನು ಬಂದು ಗೋಕಿಂಕರರೆಲ್ಲರೂ ಕೊಂಡಾಡಿದರು. ನವೆಂಬರ್ 12 ಹಾಗೂ 13ರಂದು ನಡೆದ
Read Moreಅಮೃತಧಾರಾ ಗೋಶಾಲೆ ಬಜಕೂಡ್ಲಿನಲ್ಲಿ ಹುಟ್ಟು ಹಬ್ಬ
ಮಾವಿನಕಟ್ಟೆಯ ಸದಾಶಿವ ಶರ್ಮ, ಸೌಮ್ಯ ದಂಪತಿಗಳ ಮಗಳು ಸಾನ್ವಿಯ ಹುಟ್ಟಿದ ದಿನವನ್ನು ಜಕೂಡ್ಲುಗೋಶಾಲೆಯಲ್ಲಿ ಆಚರಿಸಿದರು. ಭಜನೆ, ದೇವರಿಗೆ ವಂದನೆ, ಗೋಪೂಜೆ ಹಾಗೂ ಗೋಗ್ರಾಸ ಸಮರ್ಪಣೆ ಇತ್ಯಾದಿ ಎಲ್ಲ ನಡೆದು ಪುಟ್ಟಿ ಸಾನ್ವಿಯ ಹುಟ್ಟುಹಬ್ಬ ದೊಡ್ಡ ಸಂದೇಶವನ್ನು ಕೊಟ್ಟಿದೆ. ಗೋಗ್ರಾಸಕ್ಕೆ ಎಂದು ಚೀಲ ಭರ್ತಿ ಹಿಂಡಿಯನ್ನೂ ಮನೆಯವರು ಸಮರ್ಪಿಸಿದರು.
Read Moreಸ್ಮರಣಾರ್ಥ ಹೋಸಾಡ ಗೋಶಾಲೆಗೆ ದೇಣಿಗೆ
ಪರಮಯ್ಯ ಗಣೇಶ ಹೆಗಡೆ (ಮಾಬ್ಲ ಹೆಗಡೆ ಮನೆ ಕರ್ಕಿ) ಇವರು ತಮ್ಮ ತಂದೆ ದಿವಂಗತ ಗಣೇಶ ಹೆಗಡೆ ಮತ್ತು ತಾಯಿ ದಿವಂಗತ ಗಣಪಿ ಹೆಗಡೆ ಇವರ ಸ್ಮರಣಾರ್ಥ ಹೋಸಾಡ ಗೋಶಾಲೆಯ ಗೋವಿನ ಮೇವಿಗೆ ಒಂದು ಲಕ್ಷ ರೂಪಾಯಿಗಳನ್ನು ಸಮರ್ಪಿಸಿದರು.
Read More“ಸೇವಾ ಅರ್ಘ್ಯ” ಕಾರ್ಯಕ್ರಮ
ಬಜಕೂಡ್ಲು ಅಮೃತಧಾರಾ ಗೋಶಾಲೆ ಗೋವುಗಳ ಮೇವಿಗಾಗಿ ಹಸಿ ಹುಲ್ಲು ಸಂಗ್ರಹಿಸುವ “ಸೇವಾ ಅರ್ಘ್ಯ” ಕಾರ್ಯಕ್ರಮ ಅ.೧೧ ಮುಳ್ಳೇರಿಯಾ ಮಂಡಲ ಕುಂಬ್ಳೆ ವಲಯದ ನಾಣಿಹಿತ್ತಲು ಕೇಶವ ಪ್ರಸಾದ ಮನೆಯಲ್ಲಿ ಜರಗಿತು. ಮುಳ್ಳೇರಿಯಾ ಮಂಡಲ ಸಂಘಟನಾ ಕಾರ್ಯದರ್ಶಿ ಕೇಶವ ಪ್ರಸಾದ ಎಡಕ್ಕಾನ, ವಿದ್ಯಾರ್ಥಿವಾಹಿನೀ ಪ್ರಧಾನ ಗುರುಮೂರ್ತಿ ಮೇಣ, ಮುಷ್ಟಿ ಭಿಕ್ಷೆ ವಿಭಾಗ ಪ್ರಧಾನ ಡಾ ಡಿ ಪಿ ಭಟ್, ಕುಂಬ್ಳೆ ವಲಯ ಅಧ್ಯಕ್ಷ ಬಾಲಕೃಷ್ಣ ಶರ್ಮ, ಕಾರ್ಯದರ್ಶಿ ಗೋಪಾಲಕೃಷ್ಣ ಭಟ್ಟ, ನಾರಾಯಣ ಜಿ ಹೆಗಡೆ, ಮಹಾಬಲ ಶರ್ಮ, ವೆಂಕಟಕೃಷ್ಣ ಸಿ
Read Moreಗೋಗ್ರಾಸ ಸಮರ್ಪಣೆ
ಪಳ್ಳತಡ್ಕ ವಲಯದ ಗುರಿಕಾರ ಶ್ರೀಕೃಷ್ಣ ಭಟ್ ಮುಣ್ಚಿಕಾನ ಮತ್ತು ಮನೆಯವರು ಬಜಕೂಡ್ಲು ಅಮೃತಧಾರಾ ಗೋಶಾಲೆಗೆ ಬಂದು ೧೦೮ ಗೋಗ್ರಾಸ ಸಮರ್ಪಣೆ ನಡೆಸಿ, ದೇಣಿಗೆಯನ್ನು ನೀಡಿದರು.
Read Moreವೇಟ್ ಲಿಫ್ಟರ್ ಕೊಡುಗೆ
ಹೊಸಾಡಿನ ಅಮೃತಧಾರಾ ಗೋಶಾಲೆಗೆ ಉತ್ತರ ಕನ್ನಡ ಜಿಲ್ಲೆಯ ಕುಮಟಾದ ವೆಟರ್ನರಿ ಆಸ್ಪತ್ರೆಯಿಂದ ಅನಾರೋಗ್ಯ ದನಗಳನ್ನು ಮೇಲೆತ್ತಲು ಮತ್ತು ಸ್ಥಳ ಬದಲಾವಣೆ ಮಾಡಲು ವೇಟ್ ಲಿಫ್ಟರ್ ನ್ನು ನೀಡಲಾಯಿತು.
Read Moreಪೆರಾಜೆ ಗೋಶಾಲೆಯಲ್ಲಿ ಗೋವರ್ಧನಧಾರಿ ಗೋಪಾಲಕೃಷ್ಣ
ಪೆರಾಜೆ ಶ್ರೀರಾಮಚಂದ್ರಾಪುರ ಮಠದ ಅಮೃತಧಾರ ಗೋಶಾಲೆಯಲ್ಲಿ ಪ್ರತಿ ವರ್ಷ ಶ್ರಾವಣ ಮಾಸದ ಶ್ರವಣ ನಕ್ಷತ್ರಕ್ಕೆ ಜರಗುವ ಗೋವರ್ಧನಧಾರಿ ಗೋಪಾಲಕೃಷ್ಣ ಪೂಜೆ,ಗೋಪೂಜೆ ಯು ಸೋಮವಾರ ವೇ.ಮೂ ಮಿತ್ತೂರು ತಿರುಮಲೇಶ್ವರ ಭಟ್ ರವರ ನೇತೃತ್ವದಲ್ಲಿ ನಡೆಯಿತು. ಶೀಮಠದ ಮ್ಯಾನೇಜರ್ ಶಿವಪ್ರಸಾದ್ ರವರು ಪೂಜಾಕೈಂಕರ್ಯ ವನ್ನು ನೆರವೇರಿಸಿದರು. ಸೇವಾಸಮಿತಿ ಯ ಅಧ್ಯಕ್ಷರಾದ ಹಾರಕರೆ ನಾರಾಯಣ ಭಟ್ ರವರು ಈ ಕಾರ್ಯಕ್ರಮ ದಲ್ಲಿ ಬಾಗವಹಿಸಿದರು.
Read More