ಮಠ
ಭತ್ತದ ಭಕ್ತಿ – ರಾಮ ನೈವೇದ್ಯ.
ಮಠದಲ್ಲಿ ಎಷ್ಟು ಬಗೆಯ ಸೇವೆಗಳಿದ್ದರೂ ಈ ಸೇವೆ ಅತಿವಿಶಿಷ್ಟವಾದುದು , ನೇರವಾಗಿ ಶ್ರೀರಾಮದೇವರಿಗೇ ಅದು ನೈವೇದ್ಯವಾಗಿ ಸಲ್ಲುವುದಲ್ಲವೇ ? – ಶ್ರೀಶ್ರೀ ರಾಘವೇಶ್ವರಭಾರತೀಮಹಾಸ್ವಾಮಿಗಳು , ಶ್ರೀರಾಮಚಂದ್ರಾಪುರಮಠ ರಾಮನೈವೇದ್ಯ ಭತ್ತದ ಭಕ್ತಿಯಲ್ಲಿ ಮುಳ್ಳೇರಿಯ ಮಂಡಲ ಗದ್ದೆ ವ್ಯವಸಾಯವು ವಿರಳವಾಗುತ್ತಿರುವ ಈ ದಿನಗಳಲ್ಲಿ ಹಿರಿಯರು ಮತ್ತು ಅವರ ಮಾರ್ಗದರ್ಶನದಲ್ಲಿ ಮಕ್ಕಳು ರಾಮದೇವರ ನೈವೇದ್ಯಕ್ಕಾಗಿ ಭತ್ತದ ಕೃಷಿ ನಡೆಸಲು ನೇಜಿ ನೆಡುವ ಸುಂದರ ದೃಶ್ಯ ಕಂಡು ಬಂದದ್ದು ಕುಂಬಳೆ ಸೀಮೆ ಪ್ರದೇಶದಲ್ಲಿ. ಕೊರೋನಾ ಕಾರಣದಿಂದ ಎಲ್ಲೆಡೆ ಲಾಕ್ ಡೌನ್, ಪ್ರಯಾಣ, ಶಾಲೆ
Read Moreಹೊಸನಗರ ರಾಮಚಂದ್ರಾಪುರ ಮಠದಲ್ಲಿ ಉಪಾಕರ್ಮ
ಹೊಸನಗರ ರಾಮಚಂದ್ರಾಪುರ ಮಠದಲ್ಲಿ ಉಪಾಕರ್ಮ ಕಾರ್ಯ ರಾಮಚಂದ್ರಾಪುರ ಮಂಡಲದ ವೈದಿಕಪ್ರಧಾನರಾದ ಶೇಷಗಿರಿ ಭಟ್ಟ, ಲಕ್ಷ್ಮೀನಾರಾಯಣ ಭಟ್ಟ ಮಾಗಲು, ರಾಘವೇಂದ್ರ ಪ್ರಸಾದ ಹಾಗೂ ಮತ್ತಿತ್ತರು ಉಪಸ್ಥಿತರಿದ್ದರು.
Read Moreಜಗತ್ತಿನ ಅಮಾವಾಸ್ಯೆ ಪೂರ್ಣಿಮೆಯಾಗಿ ಪರಿವರ್ತನೆಯಾಗಲಿ – ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿ
ಅಶೋಕೆ: ಜಗತ್ತನ್ನು ವ್ಯಾಧಿ ಪೀಡಿಸುತ್ತಿದ್ದು, ಇಡೀ ಜಗತ್ತೇ ಕಂಗಾಲಾಗಿದೆ. ನಿಜಕ್ಕೂ ಜಗತ್ತು ಕತ್ತಲಲ್ಲಿದೆ, ಕಷ್ಟದಲ್ಲಿದೆ, ಬೆಳಕನ್ನು ಹುಡುಕುತ್ತಿದೆಯಾದರೂ, ಸಿಗುತ್ತಿಲ್ಲ. ಈ ಜಗತ್ತಿನ ಅಮಾವಾಸ್ಯೆ ಪೂರ್ಣಿಮೆಯಾಗಿ ಪರಿವರ್ತನೆಯಾಗಲಿ ಎಂಬ ಹಾರೈಕೆ ಎಲ್ಲರದ್ದಾಗಬೇಕಾಗಿದೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿ ಅವರು ಹೇಳಿದರು. ಅವರು ಶ್ರೀಕ್ಷೇತ್ರ ಗೋಕರ್ಣದ ಅಶೋಕೆಯ ವಿಷ್ಣುಗುಪ್ತ ವಿದ್ಯಾಪೀಠದ ಪರಿಸರದಲ್ಲಿ ೨೭ನೇ ಚಾತುರ್ಮಾಸ್ಯದ ವ್ಯಾಸಪೂಜೆ ನೆರವೇರಿಸಿ ಆಶೀರ್ವಚನ ನೀಡಿದರು. ಅಂತರಂಗದಲ್ಲಿ ಜ್ಞಾನದ ಬೆಳಕು ಹಾಗೂ ಚೈತನ್ಯದ ತಂಪನ್ನು ಉಂಟುಮಾಡುವಂತಹದ್ದು ಗುರುಪೂರ್ಣಿಮಾ. ಶಾರ್ವರಿ ಎಂದರೆ ಕತ್ತಲು,
Read More5ರಿಂದ ರಾಘವೇಶ್ವರ ಶ್ರೀ ಚಾತುರ್ಮಾಸ್ಯ: ಭಕ್ತರ ಭೇಟಿಗೆ ಅವಕಾಶ ಇಲ್ಲ
ಬೆಂಗಳೂರು: ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿ ಯವರ 27ನೇ ಚಾತುರ್ಮಾಸ್ಯ ಈ ತಿಂಗಳ 5ರಿಂದ ಸೆಪ್ಟೆಂಬರ್ 2ರವರೆಗೆ ಗೋಕರ್ಣದ ಅಶೋಕೆಯಲ್ಲಿ ಶ್ರೀಶಂಕರಾಚಾರ್ಯರು ಮೂಲಮಠ ಸ್ಥಾಪಿಸಿದ ಪರಿಸರದಲ್ಲಿ ನಡೆಯಲಿದೆ. ಅರಿವಿನ ಹಣತೆ ಹಚ್ಚೋಣ- ವಿದ್ಯಾವಿಶ್ವ ಕಟ್ಟೋಣ ಎಂಬ ಧ್ಯೇಯವಾಕ್ಯದೊಂದಿಗೆ ವಿದ್ಯಾ ಚಾತುರ್ಮಾಸ್ಯವಾಗಿ ಈ ಬಾರಿಯ ಚಾತುರ್ಮಾಸ್ಯವನ್ನು ಸರ್ಕಾರದ ನೀತಿ ನಿಯಮಗಳ ಚೌಕಟ್ಟಿನಲ್ಲಿ ಆಚರಿಸಲಾಗುತ್ತಿದೆ. ಸಮಗ್ರ ಭಾರತೀಯ ವಿದ್ಯೆಗಳ ಅಧ್ಯಯನದ ಸುಸ್ಥಾನವಾಗಲಿರುವ ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಹಾಗೂ ಅದಕ್ಕೆ ಪೀಠಿಕೆಯಾಗಿ ಮೂಡಿ ಬರುತ್ತಿರುವ ಅಪೂರ್ವ ಗುರುಕುಲಗಳ ಕಾರ್ಯ ಈ ಬಾರಿಯ ಚಾತುರ್ಮಾಸ್ಯದ
Read Moreಕೊರೋನಾ ಸಂಕಷ್ಟಕ್ಕೆ ಶ್ರೀರಾಮಚಂದ್ರಾಪುರಮಠ ಸ್ಪಂದನೆ
ಬೆಂಗಳೂರು: ಶ್ರೀರಾಮಚಂದ್ರಾಪುರ ಮಠದ ವತಿಯಿಂದ ಗುರುವಾರ ಕೋವಿಡ್-19 ಪರಿಹಾರ ನಿಧಿಗೆ 2 ಲಕ್ಷ ರೂಪಾಯಿಗಳ ದೇಣಿಗೆ ನೀಡಲಾಯಿತು. ಶ್ರೀಮಠದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಜಿ.ಭಟ್ ಮತ್ತು ಸಂದೇಶ ತಲಕಾಲಕೊಪ್ಪ ಶ್ರೀಮಠದ ಪರವಾಗಿ ದೇಣಿಕೆ ಚೆಕ್ಕನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಹಸ್ತಾಂತರಿಸಿದರು. ಶ್ರೀಮಠದ ವಿವಿಧ ಅಂಗಸಂಸ್ಥೆಗಳು ಈಗಾಗಲೇ ವಲಸೆ ಕಾರ್ಮಿಕರು ಮತ್ತು ಬಡವರಿಗೆ ಆಹಾರ ಕಿಟ್ಗಳನ್ನು ಮತ್ತು ಅಗತ್ಯ ಸಾಮಗ್ರಿಗಳನ್ನು ವಿತರಿಸಿವೆ. ಶ್ರೀಮಠದ ಭಾರತೀಯ ಗೋ ಪರಿವಾರ ಟ್ರಸ್ಟ್ ವತಿಯಿಂದ ಅಧ್ಯಕ್ಷ ಆರ್.ಕೆ.ಬೆಳ್ಳಾರೆಯವರ ನೇತೃತ್ವದಲ್ಲಿ ಯಶವಂತಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ
Read Moreಶ್ರೀ ರಾಮಚಂದ್ರಾಪುರ ಮಠದಿಂದ ಕಿಟ್ ವಿತರಣೆ
ಶ್ರೀ ರಾಮಚಂದ್ರಾಪುರ ಮಠ ಹೊಸನಗರ ವತಿಯಿಂದ ಕೊರೋನಾ ಲಾಕ್ ಡೌನ್ ಹಿನ್ನಲೆಯಲ್ಲಿ ಸಂಕಷ್ಟಕ್ಕೊಳಗಾದ ದಿನಗೂಲಿಯಿಂದ ಜೀವನ ನಡೆಸುವ ೪೮ ಕುಟುಂಬಗಳಿಗೆ ಅಕ್ಕಿ, ಬೇಳೆಕಾಳು, ಬೆಲ್ಲ, ಉಪ್ಪು ಸೇರಿದ ಕಿಟ್ ವಿತರಣೆಯನ್ನು ರಾಮಚಂದ್ರಾಪುರ ಗ್ರಾಮಪಂಚಾಯತಿ ಮುಖಾಂತರ ಶಾಸಕ ಆರಗ ಜ್ಞಾನೇಂದ್ರ ಅವರು ಮಾಡಿದರು. ನಿರ್ವಹಣಾ ಸಮಿತಿ ಅಧ್ಯಕ್ಷ ಜಟ್ಟಿಮನೆ ಗಣಪತಿ, ವ್ಯವಸ್ಥಾಪಕ ರಾಘವೇಂದ್ರಮಧ್ಯಸ್ಥ, ಮಾಧ್ಯಮ ಸಂಚಾಲಕ ಒಡ್ಡಿನಭೈಲು ವೆಂಟೇಶ, ಜಿಲ್ಲಾ ಪಂಚಾಯತಿ ಸದಸ್ಯ ಸುರೇಶಸ್ವಾಮಿರಾವ್, ತಾಲೂಕು ಪಂಚಾಯಿತಿ ಸದಸ್ಯ ಚಂದ್ರಮೌಳಿ, ಗ್ರಾಮಪಂಚಾಯತಿ ಅಧ್ಯಕ್ಷರು, ಸದಸ್ಯರು, ಪಿ ಡಿ ಓ
Read Moreಸಂಸ್ಕೃತ ಭಾಷೆಯಲ್ಲಿರುವ ಸೊಗಸು ಬೇರಾವ ಭಾಷೆಯಲ್ಲಿ ಕಾಣಲು ಸಾಧ್ಯವಿಲ್ಲ – ಶ್ರೀಸಂಸ್ಥಾನ
ವೇದ ಮತ್ತು ದೇವ ಎನ್ನುವುದು ನಾಣ್ಯದ ಎರಡು ಮುಖಗಳಾಗಿದೆ. ದೇವನು ರಾಮನಾಗಿ ಬಂದರೆ, ವೇದವು ರಾಮಾಯಣವಾಗಿ ಬಂದಿದೆ. ರಾಮಾಯಣವೂ ಒಂದು ಅವತಾರವಾಗಿದ್ದು, ಅದು ಮರೆಯಾಗ ಅವತಾರವಾಗಿದೆ. ವೇದಗಳೆಂಬುದು ಕಠಿಣವಾಗಿದ್ದು, ರಾಮಾಯಣದಲ್ಲಿ ಕಥೆ, ರಸ, ತತ್ವ ಸೇರಿ ಜೀವನಕ್ಕೆ ಬೇಕಾದ ಸಂದೇಶವಿದೆ. ಸಂಸ್ಕೃತ ಭಾಷೆಯಲ್ಲಿರುವ ಸೊಗಸು ಬೇರಾವ ಭಾಷೆಯಲ್ಲಿ ಕಾಣಲು ಸಾಧ್ಯವಿಲ್ಲ ಎಂದು ಶ್ರೀಸಂಸ್ಥಾನ ಗೋಕರ್ಣ ಶ್ರೀರಾಮಚಂದ್ರಾಪುರಮಠ ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀಮಹಾಸ್ವಾಮೀಜಿ ಹೇಳಿದರು. ಮಾಣಿ ಪೆರಾಜೆ ಶ್ರೀರಾಮಚಂದ್ರಾಪುರಮಠದ ಜನಭವನದಲ್ಲಿ ಶ್ರೀಕರಾರ್ಚಿತ ಶ್ರೀರಾಮದೇವರಿಗೆ ಸಾಮ್ರಾಜ್ಯಪಟ್ಟಾಭಿಷೇಕ ಕಾರ್ಯಕ್ರಮದ ಧರ್ಮ ಸಭೆಯಲ್ಲಿ ಆಶೀರ್ವಚನ
Read Moreವಿಶ್ವವಿದ್ಯಾ ಪೀಠ ವಿಶಿಷ್ಟ ಹಾಗೂ ವಿಭಿನ್ನ ಕಲ್ಪನೆಯ ಕೇಂದ್ರ – ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿಗಳು
ಪೆರಾಜೆ: ಭಾರತೀಯವಾದ ಅನೇಕ ವಿದ್ಯೆಗಳಿಗೆ ಅಮೂಲಾಗ್ರ ಶಿಕ್ಷಣದ ಕೊರತೆ ಇದೆ. ಎಲ್ಲಾ ವಿಧ್ಯೆಗಳು ಒಂದೇ ಸೂರಿನಲ್ಲಿ ಸಿಗಬೇಕೆಂಬ ನಿಟ್ಟಿನಲ್ಲಿ ವಿಶ್ವವಿದ್ಯಾ ಪೀಠದ ಸ್ಥಾಪನೆ ನಡೆಸಲಾಗುತ್ತಿದೆ. ಭಾರತೀಯತೆಯ ಜತೆಗೆ ಸಮಯುಗದ ಅಗತ್ಯಗಳನ್ನು ಕಲಿಸುವ ಕಾರ್ಯ ಮಾಡಲಾಗುತ್ತದೆ. ವಿದ್ಯಾರ್ಥಿಗಳಲ್ಲಿ ನಿಷ್ಠೆ ಹಾಗೂ ಜ್ಞಾನವನ್ನು ತುಂಬುವ ಕಾರ್ಯವಾಗಬೇಕು ಎಂದು ಶ್ರೀರಾಮಚಂದ್ರಾಪುರಮಠದ ಜಗದ್ಗರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿಗಳು ಹೇಳಿದರು. ಅವರು ಶುಕ್ರವಾರ ಮಾಣಿ ಪೆರಾಜೆ ಶ್ರೀರಾಮಚಂದ್ರಾಪುರಮಠದ ಜನಭವನದಲ್ಲಿ ಫೆ.16ರಂದು ಮಂಗಳೂರಿನಲ್ಲಿ ನಡೆಯುವ ವಿವಿ ಸಂವಾದ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಮಾರ್ಗದರ್ಶನ ಮಾಡಿದರು. ಪೂರ್ಣ
Read Moreಎಲ್ಲವೂ ನಿನ್ನದು ಎಂಬ ಭಾವ ಇರಲಿ : ಶ್ರೀರಾಘವೇಶ್ವರ ಭಾರತೀ ಸ್ವಾಮೀಜಿ
ಬೆಂಗಳೂರು: ಯಾವಾಗಲೂ ನನ್ನದು ಎಂಬ ಭಾವ ಬರಬಾರದು ಎಲ್ಲವೂ ನಿನ್ನದು ಎಂಬುದು ಬರಬೇಕು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರ ಭಾರತೀ ಸ್ವಾಮೀಜಿ ಅಭಿಪ್ರಾಯಪಟ್ಟರು. ಗಿರಿನಗರ ಶ್ರೀರಾಮಾಶ್ರಮದ ಪುನರ್ವಸುಭವನದಲ್ಲಿ ಭಾನುವಾರ ನಡೆದ ಧಾರಾ-ರಾಮಾಯಣ ಕಾರಣ-ಸ್ಮರಣ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ ನನ್ನ ನಿನ್ನ(ದೇವರ) ಮಧ್ಯೆ ಭೇದವಿಲ್ಲವಾಗಿಯೂ ಕೂಡ ಪ್ರಭು ನಾನು ನಿನ್ನವನು ಎನ್ನುವಾಗ ತುಂಬ ಸಮರ್ಪಣಾ ಭಾವ ಇದೆ ಹೊರತು ನೀನು ನನ್ನವನು ಎನ್ನುವಾಗ ನೀನು ನನ್ನವನು ಮಾತ್ರ ಎಂಬುದು ಬಂದಾಗ ಎಲ್ಲ ತಂಟೆ, ತಕರಾರುಗಳು ಶುರುವಾಗುತ್ತದೆ.
Read Moreಸೂರ್ಯಗ್ರಹಣ ಶಾಂತಿ ಹವನ
ಹೊಸನಗರ: ಪರಮಪೂಜ್ಯ ಶ್ರೀ ಸಂಸ್ಥಾನದವರ ದಿವ್ಯ ಮಾರ್ಗದರ್ಶನದಲ್ಲಿ ಮಾರ್ಗಶೀರ್ಷ ಕೃಷ್ಣ ಅಮಾವಾಸ್ಯೆಯಂದು ಹೊಸನಗರ ಶ್ರೀ ರಾಮಚಂದ್ರಾಪುರ ಮಠದಲ್ಲಿರುವ ಶ್ರೀ ಚಂದ್ರಮೌಳೀಶ್ವರ ದೇವರ ಸನ್ನಿಧಿಯಲ್ಲಿ ಸೂರ್ಯಗ್ರಹಣ ಶಾಂತಿ ಹವನ ಮತ್ತು ಶತಾಧಿಕ ರುದ್ರಮಂತ್ರ ಪಠಣ, ಅಭಿಷೇಕ, ಹಾಗೂ ರುದ್ರ ಹವನ ಸಂಪನ್ನಗೊಂಡಿದೆ. ೧೩೦ ರುದ್ರಾಧ್ಯಾಯಿಗಳ ಕೂಡುವಿಕೆಯಲ್ಲಿ ೧೪೧೫ ರುದ್ರ ಸಮರ್ಪಣೆ ಆಗಿದೆ.
Read Moreರಾಮಾಯಣ ಕಲ್ಪನೆಯಲ್ಲ, ಇತಿಹಾಸ : ರಾಘವೇಶ್ವರ ಭಾರತೀ ಸ್ವಾಮೀಜಿ
ಬೆಂಗಳೂರು: ರಾಮಾಯಣವೊಂದರಲ್ಲೇ ಭಾರತೀಯ ವಿದ್ಯೆಯ ಸಮಗ್ರ ಚಿತ್ರಣವೂ ಸಿಗುತ್ತದೆ. ಪ್ರಯತ್ನದ ಫಲವು ಯಶಸ್ಸಿನ ಮೂಲಕ ಲಭಿಸುತ್ತದೆ ಎಂದು ಶ್ರೀರಾಮಚಂದ್ರಾಪುರಮಠದ ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ಹೇಳಿದರು. ಗಿರಿನಗರದ ಶ್ರೀರಾಮಾಶ್ರಮದಲ್ಲಿ ಭಾನುವಾರ ನಡೆದ ಧಾರಾ ರಾಮಾಯಣ ಪ್ರವಚನದ ಮಂಗಲದಲ್ಲಿ ಶ್ರೀರಾಮಸಾಮ್ರಾಜ್ಯ ಪಟ್ಟಾಭಿಷೇಕದ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದರು. ರಾಮಾಯಣ ಎಂಬುದು ಕಲ್ಪನೆಯಲ್ಲ, ಅದು ಇತಿಹಾಸ. ರಾಮಾಯಣ, ಮಹಾಭಾರತ, ಭಾಗವತ ನಮ್ಮ ಸಂಸ್ಕೃತಿಯ ಮೂಲಾಧಾರವಾಗಿದ್ದು, ವಿಷ್ಣುಗುಪ್ತ ವಿಶ್ವವಿದ್ಯಾಲಯದಲ್ಲಿ ಈ ಮೂರನ್ನು ಮೂಲವಾಗಿಟ್ಟುಕೊಳ್ಳಲಾಗಿದೆ. ವಿಷ್ಣುಗುಪ್ತ ವಿಶ್ವ ವಿದ್ಯಾಪೀಠ ಸ್ಥಾಪನೆಯ ಮಹಾತ್ಕಾರ್ಯಕ್ಕಾಗಿ ಮಾಡಿದ ಸಂಕಲ್ಪಕ್ಕೆ
Read Moreಭಕ್ತಿ ಭಾವದಿಂದ ನಡೆದ ಕಾರ್ತೀಕ ದೀಪೋತ್ಸವ
ಭಾನ್ಕುಳಿ: ಶ್ರೀರಾಮದೇವ ಭಾನ್ಕುಳಿಮಠದ ಶ್ರೀರಾಮದೇವ ಸನ್ನಿಧಿಯಲ್ಲಿ ಕಾರ್ತೀಕ ದೀಪೋತ್ಸವ ಸೇವೆ ನಡೆಯಿತು. ದೀಪಾವಳಿ ಪ್ರತಿಪದೆಯಿಂದ ಆರಂಭಗೊಂಡ ದೀಪೋತ್ಸವ ಸೇವೆ ಕಾರ್ತೀಕ ಮಾಸದ ಕೊನೆಯ ಸೋಮವಾರವಾದ ಕಾರಣ ವಿಜೃಂಭಣೆಯಿಂದ ನಡೆಯಿತು. ಸಹಸ್ರಾಧಿಕ ದೀಪಗಳಿಂದ ಶ್ರೀರಾಮ ಸನ್ನಿಧಿ ಕಂಗೊಳಿಸಿತು. ಗೋಸ್ವರ್ಗದ ಸನಿಹದಲ್ಲೇ ಇರುವ ಪುರಾತನ ಶಿವ ದೇವಾಲಯದಲ್ಲಿ ದೀಪೋತ್ಸವ ಸೇವೆ ನೆರವೇರಿಸಿ, ಸಪ್ತಸನ್ನಿಧಿಯಲ್ಲಿ ದೀಪ ಬೆಳಗಿಸಿ ನಂತರ ರಾಮಸನ್ನಿಧಿಯಲ್ಲಿ ಸೇವೆ ಸಲ್ಲಿಸಲಾಯಿತು. ಈ ದಿನ ೧೨ ಕರ್ತೃಗಳ ಸೇವೆ ರಾಮಾರ್ಪಣಗೊಂಡಿತು.
Read Moreಶ್ರೀಮಠದ ಸಮಗ್ರ ರೂಪ ಈ ಜಾಲತಾಣ : ಶ್ರೀಸಂಸ್ಥಾನ
ಗಿರಿನಗರ: ದೇವರನ್ನು ತೋರಿಸುವುದು ಮಠ, ಶ್ರೀಮಠದ ಸಮಗ್ರ ರೂಪವನ್ನು ತೋರಿಸುವಲ್ಲಿ srisamsthana.org ಜಾಲತಾಣವು ಸಹಕಾರಿಯಾಗಲಿದೆ. ಮಠವು ಸಮಾಜಕ್ಕೆ ಬೆಳಕನ್ನು ಕೊಡಬೇಕು, ಮಠದ ಮೇಲೆ ಬೆಳಕನ್ನು ಚೆಲ್ಲಬೇಕು ಈ ಜಾಲತಾಣ. ಶ್ರೀಮಠವು ಎಲ್ಲರದ್ದೂ, ಜಗತ್ತಿನಲ್ಲಿರುವ ಎಲ್ಲರಿಗೂ ಮಠವು ಲಭ್ಯವಾಗಬೇಕು. ಮಠವು ನಮ್ಮದು ಹೌದು ಆದರೆ ನಮ್ಮದು ಮಾತ್ರವಲ್ಲ ಎಲ್ಲರದ್ದು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀಮಹಾಸ್ವಾಮಿಗಳವರು ಹೇಳಿದರು. ಗಿರಿನಗರದ ಶ್ರೀರಾಮಾಶ್ರಮದ ಪುನರ್ವಸುಭವನದಲ್ಲಿ ಭಾನುವಾರ ನಡೆದ srisamsthana.org ಜಾಲತಾಣ ಲೋಕಾರ್ಪಣೆಯ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು. ಆದಿಶಂಕರರು ಮಠವೆಂಬ ದೀಪವನ್ನು
Read Moreವಿದ್ಯಾರ್ಥಿವಾಹಿನಿಯಿಂದ ವಿಕಸನ ಕಾರ್ಯಾಗಾರ
ಗಿರಿನಗರ: ಶ್ರೀರಾಮಚಂದ್ರಾಪುರಮಠದ ವಿದ್ಯಾರ್ಥಿವಾಹಿನಿಯಿಂದ ಹೊನ್ನಾವರ ಹಾಗೂ ಮುಳ್ಳೇರಿಯಾ ಮಂಡಲಗಳಲ್ಲಿ ವಿಕಸನ ಕಾರ್ಯಾಗಾರಗಳು ಭಾನುವಾರ ನಡೆಯಿತು. ಹೊನ್ನಾವರ ಮಂಡಲದ ಕಾರ್ಯಾಗಾರದಲ್ಲಿ ೭೭ ವಿದ್ಯಾರ್ಥಿ – ವಿದ್ಯಾರ್ಥಿನಿಯರು ಭಾಗವಹಿಸಿ ಕಾರ್ಯಾಗಾರದ ಸದುಪಯೋಗ ಪಡೆದುಕೊಂಡರು. ಸಂಪನ್ಮೂಲ ವ್ಯಕ್ತಿಗಳಾಗಿ ಡಾ. ಮಾಲತಿ ಪ್ರಕಾಶ, ವೇ. ಮೂ. ನೀಲಕಂಠ ಯಾಜಿ ಅವರು ಕಾರ್ಯಾಗಾರವನ್ನು ನಡೆಸಿಕೊಟ್ಟರು. ಮುಳ್ಳೇರಿಯಾ ಮಂಡಲದಲ್ಲಿ ೫೮ ವಿದ್ಯಾರ್ಥಿ – ವಿದ್ಯಾರ್ಥಿನಿಯರು ಭಾಗವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಉಂಡೇಮನೆ ವಿಶ್ವೇಶ್ವರ ಭಟ್, ವಿದ್ಯಾ. ಎಸ್. ಅವರು ಕಾರ್ಯಾಗಾರವನ್ನು ನಡೆಸಿಕೊಟ್ಟರು. ಹೊನ್ನಾವರ ಮಂಡಲದ ಕಾರ್ಯಾಗಾರದಲ್ಲಿ ೮೦
Read Moreಸಂಪಾದಕರ ಜತೆ ಶ್ರೀಸಂವಾದ
ಗಿರಿನಗರ: ಶ್ರೀಮಜ್ಜಗದ್ಗುರುಶಂಕರಾಚಾರ್ಯಶ್ರೀಶ್ರೀರಾಘವೇಶ್ವರಭಾರತೀಮಹಾಸ್ವಾಮೀಜಿಯವರ ಪೀಠಾರೋಹಣಕ್ಕೆ 25 ಸಂವತ್ಸರಗಳು ತುಂಬಿರುವ ಹಿನ್ನೆಲೆಯಲ್ಲಿ ಶ್ರೀಮಠದ ಕಾಲು ಶತಮಾನದ ಕಾರ್ಯಚಟುವಟಿಕೆಗಳ ಸಿಂಹಾವಲೋಕನ, ಮುಂದಿನ ಕಾರ್ಯಯೋಜನೆಗಳ ಬಗ್ಗೆ ಚಿಂತನ-ಮಂಥನಕ್ಕೆ ವೇದಿಕೆ ಕಲ್ಪಿಸುವ ಸಲುವಾಗಿ ನಾಡಿನ ಪ್ರಮುಖ ಪತ್ರಿಕೆಗಳ ಸಂಪಾದಕರು, ಮಾಧ್ಯಮಸಂಸ್ಥೆಗಳ ಮುಖ್ಯಸ್ಥರ ಜತೆಗೆ ಶ್ರೀಗಳ ಸಂವಾದ ಕಾರ್ಯಕ್ರಮವನ್ನು ಪುನರ್ವಸು ಭವನದಲ್ಲಿ ಗುರುವಾರ (ಅಕ್ಟೋಬರ್ 10) ಹಮ್ಮಿಕೊಳ್ಳಲಾಗಿತ್ತು. ಇದುವರೆಗೆ ಶ್ರೀಮಠ ರಾಮಾಯಣ ಮಹಾಸತ್ರ, ವಿಶ್ವ ಗೋಸಮ್ಮೇಳನ, ಗೋಯಾತ್ರೆಯಂಥ ಬೃಹತ್ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರೆ, ಇನ್ನು ಮುಂದೆ ಸಮಾಜದ ಸರ್ವಾಂಗೀಣ ಪ್ರಗತಿಯ ಉದ್ದೇಶದ ಬೃಹತ್ ಯೋಜನೆಗಳನ್ನು ಕಾಲಮಿತಿಯಲ್ಲಿ
Read More