|| ಶ್ರೀರಾಮಚಂದ್ರಾಪುರ ಮಠದ ಯೋಚನೆ-ಯೋಜನೆ-ಕಾರ್ಯ-ಕಾರ್ಯಕ್ರಮಗಳ ಸಮಗ್ರ ದರ್ಶನ ||
Menu

ನಂತೂರು ಭಾರತೀ ಸಮೂಹ ಸಂಸ್ಥೆ : ಸಾಂಸ್ಕೃತಿಕ, ವಿಜ್ಞಾನ ಉತ್ಸವ ಸಂಸ್ಕೃತಿ, ವಿಜ್ಞಾನಕ್ಕೆ ಮಹತ್ವ : ದೀಪಕ್ ರೈ ಪಾಣಾಜೆ

  ನಂತೂರು: ಇಂದು ಸಂಸ್ಕೃತಿ ಮತ್ತು ವಿಜ್ಞಾನಕ್ಕೆ ಮಹತ್ವ ನೀಡಲಾಗಿದೆ. ಕಲಾ ಪ್ರದರ್ಶನವೂ ಅಗತ್ಯ. ಈ ನಿಟ್ಟಿನಲ್ಲಿ ಶ್ರೀ ಭಾರತೀ ಸಮೂಹ ಸಂಸ್ಥೆ ಶಿಕ್ಷಣ, ಸಂಸ್ಕೃತಿ, ಕಲೆ, ವಿಜ್ಞಾನಕ್ಕೆ ಮಹತ್ವ ನೀಡಿದೆ ಎಂದು ಚಲನಚಿತ್ರ ನಟ ದೀಪಕ್ ರೈ ಪಾಣಾಜೆ ಹೇಳಿದರು. ಅವರು ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜು ಆಶ್ರಯದಲ್ಲಿ ನಡೆದ ಅಂತರ್ ಶಾಲೆ ಸಾಂಸ್ಕೃತಿಕ, ವಿಜ್ಞಾನ ಉತ್ಸವ ಉದ್ಘಾಟಿಸಿ, ಮಾತನಾಡಿದರು.

Read More

ಗ್ರಾಮರಾಜ್ಯ ಟ್ರಸ್ಟ್ ಗೆ ಗಣ್ಯ ಮಾನ್ಯರ ಭೇಟಿ

  ಶ್ರೀ ರಾಮಚಂದ್ರಾಪುರ ಮಠದ ಅಂಗ ಸಂಸ್ಥೆ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ಸಂಕಲ್ಪದ ಯೋಜನೆ ಗ್ರಾಮರಾಜ್ಯ ಟ್ರಸ್ಟ್ (ರಿ). ಈ ಸಂಸ್ಥೆಗೆ ಸಾರ್ಥಕ ೧೫ ಸಂವತ್ಸರಗಳು ತುಂಬಿರುವ ಶುಭ ಸಂದರ್ಭದಲ್ಲಿ ಸಮಾಜದ ಸ್ವಾಸ್ಥ್ಯ ಮತ್ತು ತನ್ಮೂಲಕ ನೆಮ್ಮದಿ ಎನ್ನುವ ಕಲ್ಪನೆಯ ಅಡಿಯಲ್ಲಿ ವಿಷ ಮುಕ್ತ ಅಡುಗೆ ಮನೆಯ ಕಲ್ಪನೆ ಸಮಾಜಕ್ಕೆ ಸಾಧ್ಯವಾದಷ್ಟು ತಲುಪಿಸುವ ಯೋಚನೆ ನಮ್ಮದು. ಈ ನಿಟ್ಟಿನಲ್ಲಿ ಸಮಾಜದ ಕೆಲವು ಗಣ್ಯ ಮಾನ್ಯರನ್ನು ಆಹ್ವಾನಿಸಿ ಶ್ರೀಸಂಸ್ಥಾನದವರ ಪರಿಕಲ್ಪನೆ ಮತ್ತು ಸಮಾಜಕ್ಕೆ ಗಣ್ಯರ ಮೂಲಕ

Read More

ಅಕ್ಟೋಬರ್ – 26 – ಪಂಚಮಿ – ಭಾನುವಾರ

  ಕಾರ್ಯಕ್ರಮದ ವಿವರ ಭಿಕ್ಷಾಸೇವೆ – ವೆಂಕಟರಮಣ ಸಾದಂಗಾಯ ಮೊಕ್ಕಾಂ – ಶ್ರೀರಾಮಾಶ್ರಮ ಗಿರಿನಗರ 6.00am ಶ್ರೀಪೂಜೆ 12.15pm ಪೀಠಕ್ಕೆ, ಭಿಕ್ಷಾಂಗ ಪಾದುಕಾಪೂಜೆ, ಪಾದುಕಾಪೂಜೆ ಮಂಗಳಾರತಿ ಆಶೀರ್ವಾದ ಸಾಮೂಹಿಕ ಫಲಸಮರ್ಪಣೆ ವಿವಿದ ಯೋಜನೆಗಳಿಗೆ ದೇಣಿಗೆ ಸಮರ್ಪಣೆ ಆಶೀರ್ವಚನ ಆಶೀರ್ವಾದ ಸಾಮೂಹಿಕ ಮಂತ್ರಾಕ್ಷತೆ 5.55pm ಶ್ರೀಪೂಜೆ

Read More
ಗೋದೀಪ ~ ದೀಪಾವಳಿ ಗೋಪೂಜೆ – ಶ್ರೀರಾಮಚಂದ್ರಾಪುರ ಮಠ , ಗಿರಿನಗರ

  ಹಳ್ಳಿಗಳು ಹಾಗೂ ಹಳ್ಳಿಗರು ಬೆಂಗಳೂರನ್ನು ಸೇರುತ್ತಾ ಸಾಗಿದಂತೆ ಬೆಂಗಳೂರು ದೊಡ್ಡದಾಗುತ್ತಾ ಹೋಗಿದೆ. ನಾವು ಹಳ್ಳಿಗಳನ್ನು ಮಾತ್ರ ಬಿಟ್ಟುಬಂದಿಲ್ಲ, ಈ ಮಾಯಾ ನಗರಿಗೆ ಬರುವಾಗ ನಮ್ಮ ಸಂಸ್ಕೃತಿಯನ್ನೂ ಬಿಟ್ಟು ಬಂದಿರುವುದು ದುರಂತ. ಇಂದು ಹಳ್ಳಿಗಳಲ್ಲಿಯೂ ಕೂಡ ನಗರದ ಸಂಸ್ಕೃತಿ ಬೆಳೆಯುತ್ತಿರುವುದು ಆತಂಕಕಾರಿ ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ಹೇಳಿದರು. ಬೆಂಗಳೂರಿನ ಗಿರಿನಗದಲ್ಲಿರುವ ಶ್ರೀರಾಮಚಂದ್ರಾಪುರಮಠದ ಶಾಖೆಯಲ್ಲಿ ನಡೆದ ‘ಗೋದೀಪ – ದೀಪಾವಳಿ ಗೋಪೂಜೆ’ ಕಾರ್ಯಕ್ರಮದಲ್ಲಿ ಸಾನ್ನಿಧ್ಯವಹಿಸಿ ಗೋಸಂದೇಶ ನೀಡಿದ ಶ್ರೀಗಳು, ಭಗವಾನ್ ಶ್ರೀಕೃಷ್ಣನು ಗೋಪೂಜೆಯ ಪ್ರವರ್ತಕನಾಗಿದ್ದು,

Read More
ಗುರಿಕ್ಕಾರರ ಗುರುಮಾರ್ಗ – ಒಂದು ಸಂವಾದ ಕಾರ್ಯಾಗಾರ

ಸಮಾಜದಲ್ಲಿ ಗುರಿಕ್ಕಾರರ ಮಹತ್ವ, ಗುರಿಕ್ಕಾರರು ಎದುರಿಸುತ್ತಿರುವ ಸಮಸ್ಯೆಗಳು, ವೈದಿಕರು – ಗುರಿಕ್ಕಾರರು – ಶಿಷ್ಯರೊಂದಿಗಿನ ಸಮನ್ವಯತೆ, ಸಂಘಟನೆಯ ಪದಾಧಿಕಾರಿಗಳು – ಗುರಿಕ್ಕಾರ ನಡುವಿನ ಸಮನ್ವಯತೆ ಈ ವಿಷಯಗಳನ್ನು ಆಧರಿಸಿ ಮಂಡಲದ ಎಲ್ಲಾ ವಲಯಗಳ ಎಲ್ಲಾ ಗುರಿಕ್ಕಾರರು ಮತ್ತು ಪದಾಧಿಕಾರಿಗಳು ಭಾಗವಹಿಸಿ ಚರ್ಚಿಸಿ ಒಂದು ಸಂವಾದ ರೂಪದಲ್ಲಿ ಪರಿಹಾರ ಕಂಡುಕೊಳ್ಳುವ ಪ್ರಯತ್ನವೇ  ಈ ಕಾರ್ಯಾಗಾರದ  ಧ್ಯೇಯೋದ್ದೇಶವಾಗಿತ್ತು.   2022ರಲ್ಲಿ ನಡೆಸಿದ ಗುರಿಕ್ಕಾರರ ಸಮಾವೇಶ ನಿರೀಕ್ಷಿತ ಯಶಸ್ಸು ಕಾಣದಿದ್ದುದರಿಂದ  ಈ ಬಾರಿ ಮಂಡಲದ ನಾಲ್ಕು ಕಡೆ 3/4 ವಲಯಗಳನ್ನು ಸೇರಿಸಿ

Read More
ಗೋದೀಪ – ದೀಪಾವಳೀ ವಿಶೇಷ ಗೋಪೂಜೆ –  ಗೋಸಂರಕ್ಷಣೆ – ಲೋಕಕಲ್ಯಾಣಕಾಗಿ ವಿಶ್ವಜನನಿಯ ವಿಶಿಷ್ಟ ಪೂಜೆ –  ಶ್ರೀಗಳಿಂದ ಗೋ ಸಂದೇಶ – ಗಣ್ಯ ~ ಮಾನ್ಯರಿಂದ ವಿಶೇಷ ಗೋಪೂಜೆ – ಗೋ ಗಾನಾಮೃತ – ಗೋಸೂಕ್ತ ಪಾರಾಯಣ – ಗೋಸೂಕ್ತ ಹವನ

    ಗೋಸಂರಕ್ಷಣೆ ಹಾಗೂ ಲೋಕಕಲ್ಯಾಣದ ಮಹಾಸಂಕಲ್ಪದೊಂದಿಗೆ ದೀಪಾವಳಿಯ ಪುಣ್ಯಪರ್ವದಲ್ಲಿ ವಿಶ್ವಜನನಿಯ ವಿಶಿಷ್ಟ ಪೂಜಾ ಕಾರ್ಯಕ್ರಮ ‘ಗೋದೀಪ – ದೀಪಾವಳೀ ವಿಶೇಷ ಗೋಪೂಜೆ’ಯು ಬೆಂಗಳೂರಿನ ಗಿರಿನಗರದಲ್ಲಿರುವ ಶ್ರೀರಾಮಚಂದ್ರಾಪುರ ಮಠದ ಶಾಖೆಯಾದ ಶ್ರೀರಾಮಾಶ್ರಮದಲ್ಲಿ ದಿನಾಂಕ 22.10.2025 ಬುಧವಾರ ಸಂಜೆ 5 ಗಂಟೆಯಿಂದ ನಡೆಯಲಿದೆ. ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ದಿವ್ಯ ಸಾನ್ನಿಧ್ಯದಲ್ಲಿ ಕಾರ್ಯಕ್ರಮ ನಡೆಯಲಿದ್ದು, ದೀಪಾವಳಿ ಗೋಪೂಜೆಯ ಗೋಸಂದೇಶವನ್ನು ಶ್ರೀಗಳು ಅನುಗ್ರಹಿಸಲಿದ್ದಾರೆ. ಆಹ್ವಾನಿತ ಗಣ್ಯ-ಮಾನ್ಯ ದಂಪತಿಗಳಿಂದ ಏಕಕಾಲಕ್ಕೆ ವಿಶೇಷರೀತಿಯಲ್ಲಿ ಸಾಲಂಕೃತ ಗೋವುಗಳಿಗೆ ಪೂಜೆ ನಡೆಯಲಿದ್ದು,

Read More
ಅಕ್ಟೋಬರ್ – 20 – ಚತುರ್ದಶಿ – ಸೋಮವಾರ

  ಕಾರ್ಯಕ್ರಮದ ವಿವರ ಭಿಕ್ಷಾಸೇವೆ – ಸಮರ್ಥ L S ಮೊಕ್ಕಾಂ – ಶ್ರೀರಾಮಾಶ್ರಮ 6.15am ಶ್ರೀಪೂಜೆ 5.58pm ಶ್ರೀಪೂಜೆ

Read More
ಶ್ರೀಸಂಸ್ಥಾನದವರ ಈ ಬಾರಿಯ ಬೆಂಗಳೂರಿನ ಶ್ರೀರಾಮಾಶ್ರಮದಲ್ಲಿನ ವಸತಿಯ ಸಂದರ್ಭದಲ್ಲಿ ಶ್ರೀಪೂಜೆಯ ಸಮಯ

ಶುಭೋದಯ ಬೆಂಗಳೂರು! ಬೆಂಗಳೂರಿಗರೇ, ಬೆಳಗ್ಗೆ-ಬೆಳಗ್ಗೆಯೇ ವಾಹನ ಶಬ್ದ ಕೇಳಿ ಕೇಳಿ ಸಾಕಾಗಿದೆಯೇ? ಕಛೇರಿಯ ಒತ್ತಡಗಳಿಂದ ಮನಸ್ಸು ಬೇಸತ್ತು ಹೋಗಿದೆಯೇ? ನೆಮ್ಮದಿ, ಸಮಾಧಾನ ಬೇಕು ಅನ್ನಿಸುತ್ತಿದೆಯೇ? ನಿಮಗೊಂದು ಶುಭ ಸುದ್ದಿ. ಪರಮಪೂಜ್ಯ ಶ್ರೀಸಂಸ್ಥಾನದವರ ಗಿರಿನಗರದ ಶ್ರೀರಾಮಾಶ್ರಮದಲ್ಲಿ ವಸತಿಯ ಸಂದರ್ಭದಲ್ಲಿ ಪ್ರತಿದಿನ ಬೆಳಗ್ಗೆ ೬ ಗಂಟೆಗೆ ಶ್ರೀಪೂಜೆಯನ್ನು ಕೈಗೊಳಲಿದ್ದಾರೆ. ನೀವು, ರಾಮದೇವಸ್ಥಾನದ ಆವರಣದಲ್ಲಿ, ಗೋವುಗಳ ‘ಅಂಬಾ’ ಆಲಾಪದ ಮಧ್ಯೆ‌ ಕೂತಿದ್ದೀರಿ, ಕಣ್ಣಲ್ಲಿ ಗುರುಗಳನ್ನು ಹಾಗೂ ರಾಮದೇವರನ್ನು ತುಂಬಿಕೊಂಡಿದ್ದೀರಿ, ಕಿವಿಗಳಿಂದ ವೇದಮಂತ್ರ, ಘಂಟೆ, ಶಂಖ, ನಗಾರಿ ಶುಭವಾದ್ಯಗಳ ಘೋಷ ಕೇಳುತ್ತಿದ್ದೀರಿ, ಮನಸ್ಸಿನಲ್ಲಿ

Read More
ರಾಮಚಂದ್ರಾಪುರ-ಶಕಟಪುರ ಶಂಕರಪೀಠಗಳ ಸಮಾಗಮ 

ಶ್ರೀರಾಮಚಂದ್ರಾಪುರ ಮಠ‌ ಹಾಗೂ ಶಕಟಪುರ ಮಠಗಳ ನಡುವೆ ಅದ್ವೈತದ ಬಾಂಧವ್ಯವಿದೆ. ಇದು ರಾಜರಾಜೇಶ್ವರೀ ಅನುಗ್ರಹಿಸಿರುವ ಬಾಂಧವ್ಯ. ಈ ಬಾಂಧವ್ಯಕ್ಕೆ ಅವಳೇ ಸೇತುವೆ. ಎರಡೆಂದು ಕಂಡರೂ ಈ ಪೀಠಗಳು ಒಂದೇ ಎನ್ನುವ ಭಾವವೇರ್ಪಟ್ಟಿದೆ ಎಂದು ಶ್ರೀಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ನುಡಿದರು. ಶಕಟಪುರದ ಶ್ರೀವಿದ್ಯಾಪೀಠದ ಪರಮಪೂಜ್ಯ ಶ್ರೀಜಗದ್ಗುರು ಬದರೀ ಶಂಕರಾಚಾರ್ಯ ಶ್ರೀತೋಟಕಾಚಾರ್ಯ ಶ್ರೀವಿದ್ಯಾಭಿನವ ಶ್ರೀಶ್ರೀಕೃಷ್ಣಾನಂದತೀರ್ಥ ಮಹಾಸ್ವಾಮಿಗಳವರು ಶ್ರೀರಾಮಚಂದ್ರಾಪುರ ಮಠದ ಬೆಂಗಳೂರಿನ ಶಾಖಾ ಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅವರು ಆಶೀರ್ವಚನ ನೀಡಿದರು. ಶಕಟಪುರದ

Read More
ಶಿಷ್ಯ ಹಿತಮ್ – ಸುವರ್ಣ ಪಾದುಕೆಯ ಸ್ವರ್ಣಿಮಯಾತ್ರೆ

  ಶ್ರೀರಾಮಚಂದ್ರಾಪುರ ಮಠದ ಶಿಷ್ಯತ್ವವನ್ನು ಅಂಗೀಕರಿಸಿದ ಪ್ರತಿಯೊಬ್ಬ ಭಕ್ತನ ಹಿತವನ್ನು ಬಯಸಿ ಅವರ ಹೆಸರು, ನಕ್ಷತ್ರ,.ರಾಶಿಯನ್ನು ಹೇಳಿ, ಸಂಕಲ್ಪ ಮಾಡಿ ಭಗವಂತನಲ್ಲಿ ಸಂಪ್ರಾರ್ಥನೆ ಮಾಡಿ ವಿಹಿತವಾದ ಒಂದು ಉತ್ತಮ ಕರ್ಮವನ್ನು ಮಾಡುವುದು’ ಶಿಷ್ಯ ಹಿತಮ್’ ನ ಉದ್ದೇಶ. ಇದರ ಅಂಗವಾಗಿ ಶ್ರೀಗುರುಪೀಠದ ಆಶೀರ್ವಾದವನ್ನು ಪಡೆದುಕೊಂಡು ಸುವರ್ಣ ಪಾದುಕೆಯು ಶಿಷ್ಯರ ಮನೆ ಮನೆಗಳಿಗೆ ಆಗಮಿಸಲಿದೆ. ‘ ಶ್ರೀಗುರುಗಳು ಶಿಷ್ಯರಿಗೆ ತಾವಾಗಿಯೇ ತಿಳಿದು ಕೊಟ್ಟ ಅನುಗ್ರಹಕ್ಕೆ ತುಂಬಾ ಫಲವಿದೆಯಂತೆ. ಅದೇ ರೀತಿಯಲ್ಲಿ ನಾವು ಕರೆಯದೆ ಗುರುಗಳು ತಾವಾಗಿಯೇ ನಮ್ಮ ಮನೆಗಳಿಗೆ

Read More
ಅಕ್ಟೊಬರ್ – 11 – ಪಂಚಮಿ – ಶನಿವಾರ

  ಕಾರ್ಯಕ್ರಮದ ವಿವರ ಭಿಕ್ಷಾಸೇವೆ – ಡಾ. ವಿಶ್ವನಾಥ ಭಟ್ ಮೊಕ್ಕಾಂ – ರಾಮಾಶ್ರಮ ಗಿರಿನಗರ 6.00am ಶ್ರೀಪೂಜೆ 12.00pmಭಿಕ್ಷಾಂಗ ಪಾದುಕಾಪೂಜೆ ಮಂಗಳಾರತಿ ಆಶೀರ್ವಾದ 1.15pm ಪ್ರಯಾಣ ಗಿರಿನಗರ 3.15pm ರಾಮಾಶ್ರಮದಲ್ಲಿ ಸ್ವಾಗತ, ಫಲಸಮರ್ಪಣೆ 6.03pm ಶ್ರೀಪೂಜೆ

Read More
ಶ್ರೀಮಠದ ಅಂಗ ಸಂಸ್ಥೆಗಳಲ್ಲಿ ನವರಾತ್ರಿ ಉತ್ಸವ

ಸಾಗರದ ಅಗ್ರಹಾರದಲ್ಲಿ ಶ್ರೀ ರಾಮಚಂದ್ರಾಪುರಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮೀಜಿಯವರ ದಿವ್ಯಸಾನ್ನಿಧ್ಯದಲ್ಲಿ ಸೆ.22ರಿಂದ ಅ.2ರವರೆಗೆ ನವರಾತ್ರ ನಮಸ್ಯಾ ಕಾರ್ಯಕ್ರಮ ನಡೆಯಿತು. ಪ್ರತಿದಿನ ಮಧ್ಯಾಹ್ನ 3.30 ರಿಂದ 5 ಗಂಟೆಯವರೆಗೆ ಲಲಿತೋಪಾಖ್ಯಾನ ಪ್ರವಚನ, ದೀಪಾಲಂಕಾರ, ದುರ್ಗಾದೀಪ ಪೂಜೆ, ಕುಂಕುಮಾರ್ಚನೆ, ಏಕಾದಶಿ ದಿನ ವಿಶೇಷ ಶ್ರೀಚಕ್ರ ಆರಾಧನೆ ಸಂಪನ್ನಗೊಂಡಿತು. ——— ನವರಾತ್ರಿ ಮಹೋತ್ಸವದ ಅಂಗವಾಗಿ ಬೆಂಗಳೂರು ಶ್ರೀ ಭಾರತೀ ವಿದ್ಯಾಲಯದಲ್ಲಿ 26 ಸೆಪ್ಟೆಂಬರ್ 2025ರಂದು ಭಕ್ತಿಯಿಂದ ಹಾಗೂ ಸಂಭ್ರಮದಿಂದ ಸರಸ್ವತಿ ಪೂಜೆ ಆಚರಿಸಲಾಯಿತು. ವಿದ್ಯೆ ಮತ್ತು ಜ್ಞಾನದ

Read More
ಸೇವೆಗೆ ಫಲ ಇದೆ ಅದು ಶಾಶ್ವತ ಧನ್ಯತೆ ನೀಡಲಿದೆ : ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು

ಸಾಗರ: ನಿಸ್ವಾರ್ಥವಾದ ಸೇವೆಗೆ ವಿಶೇಷ ಫಲವಿದೆ ಮತ್ತು ಅದು ಶಾಶ್ವತವಾದ ಧನ್ಯತೆಯನ್ನು ನೀಡಲಿದೆ ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ಹೇಳಿದರು.   ಸಾಗರ ಅಗ್ರಹಾರದ ಶ್ರೀರಾಘವೇಶ್ವರ ಸಭಾ ಭವನ ಸಮಿತಿ  ಏರ್ಪಡಿಸಿದ್ದ ಭವನ  ನಿರ್ಮಾಣಕ್ಕೆ ಸಹಕರಿಸಿದವರಿಗೆ ಗೌರವ ಸಮರ್ಪಣೆ ಧನ್ಯಾನುಗ್ರಹ ಸಮಾರಂಭದಲ್ಲಿ ಅವರು ದಿವ್ಯಸಾನ್ನಿಧ್ಯವಹಿಸಿ ದಾನಿಗಳಿಗೆ ಆಶೀರ್ವದಿಸಿ ನಂತರ ಆಶೀರ್ವಚನ ನೀಡಿದರು. ನಮ್ಮ ದೊಡ್ಡ ಗುರುಗಳು ಆ ಕಷ್ಟ ಕಾಲದಲ್ಲಿಯೂ ಇಲ್ಲಿಯ ನೆಲ ಖರೀದಿಸಿ ಕಾಪಾಡಿಕೊಂಡು ಬಂದಿರುವುದು ಒಂದು ಸಂಗತಿಯಾದರೆ ತಾಯಿ

Read More
ಆತ್ಮ ವಿಶ್ವಾಸಕ್ಕಿಂತ ದೊಡ್ಡ ಸಂಪತ್ತು ಈ ಜಗತ್ತಿನಲ್ಲಿ ಬೇರೆ ಇಲ್ಲ: ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು

ಆತ್ಮ ವಿಶ್ವಾಸಕ್ಕಿಂತ ದೊಡ್ಡ ಸಂಪತ್ತು ಈ ಜಗತ್ತಿನಲ್ಲಿ ಬೇರೆ ಯಾವುದೂ ಇಲ್ಲ. ನಾವು ಮಾಡುವ ಕೆಲಸದಲ್ಲಿ ಯಶಸ್ಸು ಸಾಧ್ಯ ಎನ್ನುವ ಆತ್ಮವಿಶ್ವಾಸ ಇದ್ದರೆ ಆ ಕೆಲಸದಲ್ಲಿ ಸಾಧನೆ ಖಚಿತ. ಆರಂಭದಲ್ಲಿಯೇ ಸಾಧ್ಯವಾ.. ಸಾಧ್ಯವಿಲ್ಲ ಎನ್ನುವ ಅನುಮಾನಗಳು ಹುಟ್ಟಿದರೆ ಒಂದು ಹೆಜ್ಜೆಯನ್ನೂ ಮುಂದಿಡುವುದಕ್ಕೆ ಸಾಧ್ಯವಿಲ್ಲ ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ಹೇಳಿದರು. ಸಾಗರದ ಶ್ರೀರಾಘವೇಶ್ವರ ಭವನದಲ್ಲಿ ಕಳೆದ 15 ದಿನಗಳಿಂದ ನಡೆದ ‘ನವರಾತ್ರ ನಮಸ್ಯಾ’ ಸಮಾರೋಪ ಧಾರ್ಮಿಕ ಸಭೆಯಲ್ಲಿ ಶನಿವಾರ ಅವರು ಆಶೀರ್ವಚನ

Read More
ಸಂಘ ಜೀವಿಯಾಗಿ ಬದುಕಿ, ಆಧ್ಯಾತ್ಮಿಕಕ್ಕೆ ಶರಣಾಗಿ : ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು

ಸಾಗರ: ಸಾಮಾಜಿಕವಾಗಿ ಬದುಕನ್ನು ಕಂಡುಕೊಳ್ಳುವವನಿಗೆ ಒಂಟಿತನ ಎಂದೂ ಕಾಡುವುದಿಲ್ಲ ಹಾಗಾಗಿ ಸಂಘ ಜೀವಿಯಾಗಿ ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ಹೇಳಿದರು. ಸಾಗರ ಅಗ್ರಹಾರದಲ್ಲಿರುವ ಶ್ರೀ ರಾಘವೇಶ್ವರ ಭವನದ ಶ್ರೀಮನ್ನಗರ ವೇದಿಕೆಯಲ್ಲಿ ಏರ್ಪಡಿಸಿರುವ ನವರಾತ್ರ ನಮಸ್ಯಾ ಲಲಿತೋಪಾಖ್ಯಾನ ಪ್ರವಚನದ ಸಮಾರೋಪದಲ್ಲಿ ಅವರು ನುಡಿದರು. ಪ್ರಸ್ತುತ ದಿನಮಾನದಲ್ಲಿ ವೃದ್ದರನ್ನು ಒಂಟಿಯಾಗಿ ಬಿಟ್ಟು ಹೋಗಲಾಗುತ್ತಿದೆ ಆಗೆಲ್ಲ ಅವರನ್ನು ಒಂಟಿತನ ಕಾಡುವುದು ಸಹಜ ಆದರೆ ಸಂಘ ಜೀವಿಯಾಗುವುದು ಒಂದು ಪ್ರಯೋಜನವಾದರೆ ಮೊದಲಿಂದಲೂ ಆಧ್ಯಾತ್ಮಿಕಕ್ಕೆ ಶರಣಾಗಿ ಬದುಕಿದರೆ ಕೊನೆಯಲ್ಲಿ

Read More
ಇನ್ನೊಬ್ಬರಿಗೆ ಕಷ್ಟ ಕೊಟ್ಟು ಖುಷಿ ಪಡುವವರು ರಕ್ಕಸರು : ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು

  ಸಾಗರ: ಇನ್ನೊಬ್ಬರ ಕಷ್ಟ ನೋಡಿ ಖುಷಿ ಪಡುವ ವರ್ಗ ಒಂದಾದರೆ ಇನ್ನೊಬ್ಬರಿಗೆ ತಾವೇ ಕಷ್ಟ ಕೊಟ್ಟು ಖುಷಿ ಪಡುವ ವರ್ಗ ಇನ್ನೊಂದು ಈ ಎರಡೂ ವರ್ಗದವರು ದುರ್ಜನರು ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ಹೇಳಿದರು.   ಸಾಗರದ ಶ್ರೀರಾಘವೇಶ್ವರ ಭವನದ ಶ್ರೀಮನ್ನಗರ ವೇದಿಕೆಯಲ್ಲಿ ಏರ್ಪಡಿಸಿರುವ ವಿಜಯದಶಮಿ ವಿಶೇಷದೊಂದಿಗೆ ನವರಾತ್ರ ನಮಸ್ಯಾದ 11 ನೇ ದಿನದ ಲಲಿತೋಪಾಖ್ಯಾನ ಪ್ರವಚನದಲ್ಲಿ ಅವರು ನುಡಿದರು. ಕಷ್ಟ ನೋಡಿ ಖುಷಿ ಪಡುವ ವರ್ಗ ನರಾಧಮರಾದರೆ ಕಷ್ಟ ಕೊಟ್ಟು ಖುಷಿ

Read More
ಭಾವ ಇಲ್ಲದ ಅರ್ಚನೆಗೆ ಯಾವುದೇ ಫಲ ಇಲ್ಲ : ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು

ಸಾಗರ: ಭಾವ ಇಲ್ಲದ ಅರ್ಚನೆಗೆ ಯಾವುದೇ ಫಲ ಇಲ್ಲ. ಪೂಜೆಯಲ್ಲಿ ದೇವರಿಗೆ ಎಷ್ಟು ವಸ್ತು ಸಮರ್ಪಿಸುತ್ತಿದ್ದೇವೆ ಎನ್ನುವುದಕ್ಕಿಂತ ಭಕ್ತಿಯಲ್ಲಿ ಭಾವಿಸಿ ಪೂಜೆ ಮಾಡುತ್ತಿದ್ದೇವೆಯೇ? ಎನ್ನುವುದು ಅತೀ ಮುಖ್ಯ ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ಹೇಳಿದರು. ಸಾಗರ ಅಗ್ರಹಾರದಲ್ಲಿರುವ ಶ್ರೀ ರಾಘವೇಶ್ವರ ಭವನದ ಶ್ರೀಮನ್ನಗರ ವೇದಿಕೆಯಲ್ಲಿ ಏರ್ಪಡಿಸಿರುವ ನವರಾತ್ರ ನಮಸ್ಯಾದ 10 ನೇ ದಿನದ ಲಲಿತೋಪಾಖ್ಯಾನ ಪ್ರವಚನದಲ್ಲಿ ಅವರು ನುಡಿದರು. ಯಾರ ಕುರಿತು ಪೂಜಿಸುತ್ತೇವೋ ಆ ಕುರುಣಾಮಯಿಯ ಕುರಿತು ನಮ್ಮ ಚಿತ್ತಭಿತ್ತಿಯಲ್ಲಿ ಭಾವನೆಯೇ

Read More
 ಶಾಸನತಂತ್ರ ~ ಸೇವಾಖಂಡ ಕಾರ್ಯಗಾರ 3

ಸಾಗರ: ಶ್ರೀರಾಮಚಂದ್ರಾಪುರ ಮಠದ ಶಾಸನತಂತ್ರ ~ ಸೇವಾಖಂಡ ಕಾರ್ಯಗಾರ 3 ಸಾಗರ ಬಾಪಟ್ ಸಭಾಭವನದಲ್ಲಿ ಭಾನುವಾರ ನಡೆಯಿತು. ಬೆಳಗ್ಗೆ ಶ್ರೀರಾಮ ದೇವರ ಸನ್ನಿಧಿಯಲ್ಲಿ ಫಲ ಸಮರ್ಪಣೆ ಮಾಡಿ ಪ್ರಾರ್ಥನೆ ಮಾಡಲಾಯಿತು. ಸಾಗರ ರಾಘವೇಶ್ವರ ಭವನ ಸಮಿತಿ ಅಧ್ಯಕ್ಷ ಹರನಾಥ ರಾವ್ ಮತ್ತಿಕೊಪ್ಪ ಕಾರ್ಯಾಗಾರಕ್ಕೆ ಚಾಲನೆ ನೀಡಿದರು. ಶ್ರೀಮಠ ಅಂದಿನಿಂದ ಇಂದಿನವರೆಗೆ ವಿಷಯದ ಕುರಿತು ವಿದ್ವಾನ್ ಗಜಾನನ ರೇವಣಕಟ್ಟ ಮಾತಾಡಿದರು. ಶಾಸನತಂತ್ರ ಅಧ್ಯಕ್ಷ ಮೋಹನ ಹೆಗಡೆ ಅರ್ಹತೆಯ ಅಷ್ಟ ಸೂತ್ರಗಳ ಬಗ್ಗೆ ಸೇವಾ ಬಿಂದುಗಳಿಗೆ ತಿಳಿಸಿಕೊಟ್ಟರು. ಶ್ರೀಮಠದ ಆಡಳಿತ ವ್ಯವಸ್ಥೆಯಾದ

Read More
ಪ್ರಕೃತಿಗೆ ವಿರುದ್ಧವಾಗಿ ನಡೆದುಕೊಂಡರೆ ಆಪತ್ತು ಖಚಿತ : ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು

  ಸಾಗರ: ಗೆಲುವು ಬಂದಾಗ ಎಲ್ಲವೂ ನಾನು, ನನ್ನಿಂದ ಎನ್ನುವ ಮನುಷ್ಯ ಸೋತಾಗ ಹಣೆ ಬರಹ, ವಿಧಿ ಲಿಖಿತ ಎಂಬ ಶಬ್ದ ಬಳಸುತ್ತಾನೆ ಆದರೆ ನಿಜವಾಗಿಯೂ ಗೆಲುವು ಮತ್ತು ಸೋಲು ಎಲ್ಲವೂ ಭಗವಂತನ ಇಚ್ಚೆ. ಗೆದ್ದಾಗಲೂ ಅವನನ್ನೇ ಸ್ಮರಿಸಬೇಕು ಇನ್ನು ಸೋತಾಗ ಹೇಗೂ ಭಗವಂತನ ನೆನಪು ಮಾಡಲೇ ಬೇಕು ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ಹೇಳಿದರು. ಸಾಗರದ ಶ್ರೀ ರಾಘವೇಶ್ವರ ಸಭಾ ಭವನದ ಶ್ರೀಮನ್ನಗರ ವೇದಿಕೆಯಲ್ಲಿ ಏರ್ಪಡಿಸಿರುವ ನವರಾತ್ರ ನಮಸ್ಯಾದ 9

Read More
ದುರಹಂಕಾರ ವಿಚಿತ್ರ ರೋಗ ಅದು ವ್ಯಕ್ತಿಯ ಪತನಕ್ಕೆ ಕಾರಣ – ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು

ಸಾಗರ:  ದುರಹಂಕಾರ ಎನ್ನುವುದು ಮನುಷ್ಯ ದೇಹದೊಳಗೆ ತಿಳಿಯದೆ ಬಂದಿರ ಬಹುದಾದ ಖಾಯಿಲೆ ಇದ್ದ ರೀತಿ, ಗೊತ್ತಿರುವ ಖಾಯಿಲೆಗೆ ಚಿಕಿತ್ಸೆ ಕೊಡಿಸಬಹುದು ನಮ್ಮ ದೇಹದೊಳಗೆ ಗೊತ್ತಿಲ್ಲದಿರುವ ಖಾಯಿಲೆ ಇದ್ದರೆ ಅದಕ್ಕೆ ಚಿಕಿತ್ಸೆ ಸಾಧ್ಯವಿಲ್ಲ ಈ ದುರಹಂಕಾರವೂ ಅದೇ ರೀತಿ ಇದಕ್ಕೆ ಚಿಕಿತ್ಸೆ ಇಲ್ಲ ಅದು ಅವನ ಪತನದಲ್ಲಿ ಪರಿವಸನವಾಗಲಿದೆ ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ಹೇಳಿದರು. ಸಾಗರ ಅಗ್ರಹಾರದಲ್ಲಿರುವ ಶ್ರೀ ರಾಘವೇಶ್ವರ ಭವನದ ಶ್ರೀಮನ್ನಗರ ವೇದಿಕೆಯಲ್ಲಿ ಏರ್ಪಡಿಸಿರುವ ನವರಾತ್ರ ನಮಸ್ಯಾದ ೮ ನೇ

Read More