ಸುದ್ದಿ
ರಾಮಸೇತು ವೈಜ್ಞಾನಿಕ ಸತ್ಯ
ರಾಮಸೇತು ವೈಜ್ಞಾನಿಕ ಸತ್ಯ. ಇದು ಕೇವಲ ಕಾಲ್ಪನಿಕವಲ್ಲ. ವಾಲ್ಮೀಕಿ ರಾಮಾಯಣದಲ್ಲಿ ವರ್ಣನೆಯಾದ ಅದ್ಭುತ ಸಾಗರಸೇತು ಆಧುನಿಕ ವಿಜ್ಞಾನದ ವಿಶ್ಲೇಷಣೆಯಲ್ಲೂ ಅಂತೆಯೇ ಇದೆ ಎಂದು ಶ್ರೀ ರಾಘವೇಶ್ವರಭಾರತೀಸ್ವಾಮೀಜಿ ಹೇಳಿದರು. ಮೂರೂರು ರಾಮಲೀಲಾ ಮೈದಾನದಲ್ಲಿ ನಡೆದ ರಾಮಕಥೆ ಸಮಾರೋಪದಲ್ಲಿ ಆಶೀರ್ವಚನ ನೀಡಿದ ಶ್ರೀಗಳು, “ತಳದಲ್ಲಿ ಮರ, ಎರಡನೇ ಸ್ತರದಲ್ಲಿ ಬಂಡೆ ಮತ್ತು ಮೇಲೆ ಮರಳಿನಿಂದ ಸಾಗರಸೇತು ನಿರ್ಮಾಣವಾಗಿದೆ ಎಂಬ ವಿವರಣೆ ವಾಲ್ಮೀಕಿ ರಾಮಾಯಣದಲ್ಲಿ ಬರುತ್ತದೆ. ವಿಶ್ವದ ಏಕೈಕ ಸಾಗರಸೇತುವನ್ನು ವಿಜ್ಞಾನದ ವಿಶ್ಲೇಷಣೆಗೆ ಒಳಪಡಿಸಿದಾಗ ಕೂಡಾ ಇಂದೇ ಅಂಶಗಳು ದೃಢಪಟ್ಟಿವೆ” ಎಂದು
Read Moreಶ್ರೀ ಅಖಿಲ ಹವ್ಯಕ ಮಹಾಸಭೆಯ 79 ನೇ ವರ್ಷದ ಹವ್ಯಕ ಸಂಸ್ಥಾಪನೋತ್ಸವ
ಗಡ್ಡಬಿಟ್ಟವರು ಮಾತ್ರ ಋಷಿಗಳಲ್ಲ, ಸಾಧನೆ ಮಾಡಿ ಇಂದು ಇಲ್ಲಿ ಪುರಸ್ಕೃತರಾದ ಎಲ್ಲರೂ ಋಷಿ ಸಮಾನರೇ ಆಗಿದ್ದಾರೆ. ಆದರೆ ಸಾಧನೆಯ ವಿಧಾನಗಳು ಬೇರೆ ಬೇರೆ ಎಂದು ಡಾ.ಜಿ.ಎಲ್ ಹೆಗಡೆ ಹೇಳಿದರು. ಶ್ರೀ ಅಖಿಲ ಹವ್ಯಕ ಮಹಾಸಭೆಯ 79 ನೇ ವರ್ಷದ ಹವ್ಯಕ ಸಂಸ್ಥಾಪನೋತ್ಸವ ಹಾಗೂ ಹವ್ಯಕ ವಿಶೇಷ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅಭ್ಯಾಗತರಾಗಿ ಮಾತನಾಡಿದ ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾದ ಡಾ.ಜಿ.ಎಲ್ ಹೆಗಡೆ, ನಾವು ಭವ್ಯವಾದ ಸಂಸ್ಕೃತಿ ಹೊಂದಿದ್ದೇವೆ. ದಿವ್ಯವಾದ ಇತಿಹಾಸ ಹೊಂದಿದ್ದೇವೆ. ಆದರೆ ನಮ್ಮ ಪಠ್ಯಗಳಲ್ಲಿ ರಾಬರ್ಟ್ ಕ್ಲೈವ್ ಹಾಗೂ ಅವನ ಸಂಸಾರದ ಕುರಿತು ಓದುವಂತಹ ಸ್ಥಿತಿ
Read Moreಸಜ್ಜನರ ಸಿಟ್ಟು ಲೋಕಕ್ಕೆ ಅಪಾಯಕಾರಿ; ರಾಘವೇಶ್ವರ ಶ್ರೀ
ಸಜ್ಜನರ ಸಮಾಧಾನ, ಕ್ಷಮೆ, ಸರಳತೆಯನ್ನು ಎಂದೂ ಅವರ ಅಸಾಮಥ್ರ್ಯ, ದೌರ್ಲಲ್ಯ ಎಂದು ಭಾವಿಸಬಾರದು; ಏಕೆಂದರೆ ಅವರ ಸಿಟ್ಟು ಲೋಕದ ಪಾಲಿಗೆ ಅಷ್ಟೇ ಕಂಟಕ ಎಂದು ಗೋಕರ್ಣ ಮಂಡಲಾಧೀಶ್ವರ ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿ ನುಡಿದರು. ಮೂರೂರು ಪ್ರಗತಿ ವಿದ್ಯಾಲಯದ ರಾಮಲೀಲಾ ಮೈದಾನದಲ್ಲಿ ಐದು ದಿನಗಳ ‘ಸಾಗರಸೇತು’ ರಾಮಕಥಾ ಸರಣಿಯ ಮಂಗಲ ಪ್ರವಚನ ಅನುಗ್ರಹಿಸಿದ ಅವರು, ಸಿಟ್ಟು ನಮ್ಮ ವಿವೇಕವನ್ನು ಹಾಳು ಮಾಡುತ್ತದೆ. ಸಿಟ್ಟು ಶಿವನ ಸೃಷ್ಟಿ. ಅದು ನಮ್ಮ ಕೈಯಲ್ಲಿದ್ದರೆ ಗುಣ. ಆದರೆ ಸಿಟ್ಟಿನ ಕೈಯಲ್ಲಿ ನಾವಿದ್ದರೆ
Read Moreನಮ್ಮ ಹೃದಯವೇ ರಾಮಮಂದಿರ; ರಾಘವೇಶ್ವರ ಶ್ರೀ
ಪ್ರತಿಯೊಬ್ಬರ ಅಂತರಾಳದಲ್ಲಿ ಆತ್ಮರೂಪದ ರಾಮನಿದ್ದಾನೆ. ನಮ್ಮ ಹೃದಯವೇ ರಾಮಮಂದಿರ ಎಂಬ ಸತ್ಯವನ್ನು ಅರಿತುಕೊಳ್ಳುವುದೇ ಬದುಕಿನ ಧರ್ಮ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿ ನುಡಿದರು. ಮೂರೂರು ಪ್ರಗತಿ ವಿದ್ಯಾಲಯದ ರಾಮಲೀಲಾ ಮೈದಾನದಲ್ಲಿ ಐದು ದಿನಗಳ ‘ರಾಮಸೇತು’ ರಾಮಕಥಾ ಸರಣಿಯ ನಾಲ್ಕನೇ ದಿನದ ಪ್ರವಚನ ಅನುಗ್ರಹಿಸಿದ ಅವರು, ಲಂಕಾ ಸಾಮ್ರಾಜ್ಯ ತೊರೆದ ಬಳಿಕ ಆತ್ಮದಲ್ಲಿರುವ ರಾಮನಷ್ಟೇ ವಿಭೀಷಣನ ಆಸ್ತಿ. ವಿಭೀಷಣನ ಭವಿಷ್ಯದ ಬದುಕು ಅಮೂರ್ತವಾಗಿತ್ತು. ಅಮೂರ್ತದಿಂದ ರಾಮಮೂರ್ತಿಯನ್ನು ಕಂಡುಕೊಂಡಿದ್ದರಿಂದಲೇ ವಿಭೀಷಣನ ಮುಂದಿನ ಹಾಸಿ ಸ್ಪಷ್ಟವಾಯಿತು. ಈ ಅರಿವೇ ಮುಂದೆ
Read Moreಆಸೆಯ ಪಾಶದಿಂದ ಮುಕ್ತಿ ಪಡೆದರಷ್ಟೇ ಮನಃಶಾಂತಿ: ರಾಘವೇಶ್ವರ ಶ್ರೀ
ಆಸೆಯ ಪಾಶದಿಂದ ಮುಕ್ತಿ ಪಡೆದರೆ ಮಾತ್ರ ಮನಃಶಾಂತಿ ಸಾಧಿಸಲು ಸಾಧ್ಯ. ಆಸೆಯ ಪಾಶದಿಂದ ಏನು ಅನಾಹುತವಾಗುತ್ತದೆ ಎನ್ನುವುದಕ್ಕೆ ರಾವಣನೇ ನಿದರ್ಶನ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿ ನುಡಿದರು. ಮೂರೂರು ಪ್ರಗತಿ ವಿದ್ಯಾಲಯದ ರಾಮಲೀಲಾ ಮೈದಾನದಲ್ಲಿ ಐದು ದಿನಗಳ ‘ರಾಮಸೇತು’ ರಾಮಕಥಾ ಸರಣಿಯ ಮೂರನೇ ದಿನದ ಪ್ರವಚನ ಅನುಗ್ರಹಿಸಿದ ಅವರು, “ಆಸೆ ಮನದಾಳದಲ್ಲಿ ಹುಟ್ಟಿಕೊಂಡರೆ ತಾನು ಸುಮ್ಮನಿರುವುದಿಲ್ಲ. ನಮ್ಮನ್ನು ಸಮ್ಮನಿರಲು ಬಿಡುವುದಿಲ್ಲ. ಆಸೆ ಅನಾಹುತಕ್ಕೆ ಕಾರಣ. ಇದು ರಜೋಗುಣ. ಭಯ, ಚಿಂತೆ, ದ್ವೇಷ, ಕ್ರೋಧ ಎಲ್ಲವೂ ಆಸೆಯ
Read Moreರಾಮ- ಸೀತೆಯರ ಪ್ರೀತಿ ಅಲೌಕಿಕ, ಧರ್ಮಸಮ್ಮತ: ರಾಘವೇಶ್ವರ ಸ್ವಾಮೀಜಿ
ರಾಮ- ಸೀತೆಯರ ಪ್ರೀತಿಯನ್ನು ಕ್ಷುದ್ರ ದೃಷ್ಟಿಯಿಂದ ನೋಡದೇ ಅದನ್ನು ಮೂಲಪ್ರಕೃತಿ ಮತ್ತು ಪರಮ ಪುರುಷನ ಪ್ರೀತಿಯಾಗಿ ಲೌಕಿಕ ದೃಷ್ಟಿಯಿಂದ ನೋಡಬೇಕು ಎಂದು ಗೋಕರ್ಣ ಮಂಡಲಾಧೀಶ್ವರ ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿ ನುಡಿದರು. ಮೂರೂರು ಪ್ರಗತಿ ವಿದ್ಯಾಲಯದ ರಾಮಲೀಲಾ ಮೈದಾನದಲ್ಲಿ ಐದು ದಿನಗಳ ‘ರಾಮಸೇತು’ ರಾಮಕಥಾ ಸರಣಿಯ ಎರಡನೇ ದಿನದ ಪ್ರವಚನ ಅನುಗ್ರಹಿಸಿದ ಅವರು, ರಾಮ ಸೀತೆಯ ಪ್ರೀತಿ ಪರಿಪೂರ್ಣ. ಪರಿಪೂರ್ಣ ಪ್ರೀತಿಯಷ್ಟೇ ವಿಶ್ವದ ಪ್ರೀತಿಯಾಗಿ ಭಗವತ್ ಪ್ರೀತಿಯಾಗಿ ಮಾರ್ಪಡುತ್ತದೆ ಎಂದು ವಿಶ್ಲೇಷಿಸಿದರು. ಪ್ರೀತಿ ಹಾಗೂ ತ್ಯಾಗಕ್ಕೆ ರಾಮ
Read Moreರಾಮನ ಸೀತಾಪ್ರೀತಿ ಪ್ರಶ್ನಾತೀತ: ರಾಘವೇಶ್ವರ ಶ್ರೀ
ಅಗ್ನಿಪರೀಕ್ಷೆ ಹಿನ್ನೆಲೆಯಲ್ಲಿ ಸೀತೆಯ ಬಗೆಗಿನ ರಾಮನ ಪ್ರೀತಿಯನ್ನು ಪ್ರಶ್ನಿಸುವವರಿದ್ದಾರೆ. ಆದರೆ ಈ ಎಲ್ಲ ಪ್ರಶ್ನೆಗಳಿಗೆ ರಾಮಸೇತು ಉತ್ತರ ಎಂದು ಗೋಕರ್ಣ ಮಂಡಲಾಧೀಶ್ವರ ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿ ನುಡಿದರು. ಮೂರೂರು ಪ್ರಗತಿ ವಿದ್ಯಾಲಯದ ರಾಮಲೀಲಾ ಮೈದಾನದಲ್ಲಿ ಬುಧವಾರ ಆರಂಭವಾದ ಐದು ದಿನಗಳ ‘ರಾಮಸೇತು’ ರಾಮಕಥಾ ಸರಣಿಯ ಮೊದಲ ದಿನದ ಪ್ರವಚನ ಅನುಗ್ರಹಿಸಿದ ಅವರು, “ಜಗತ್ತಿನ ತಂದೆ ತಾಯಿಗಳನ್ನು ಒಂದಾಗಿಸಿದ್ದು ರಾಮಸೇತು. ತ್ರೇತಾಯುಗ ಯುಗದಲ್ಲಿ ಸೀತೆಗಾಗಿ ವಿಶ್ವಯುದ್ಧವನ್ನೇ ರಾಮ ನಡೆಸಿದ್ದಾನೆ. ಸಮುದ್ರಕ್ಕೆ ಸೇತುವೆ ನಿರ್ಮಿಸಿದ್ದು ಸೀತೆಗಾಗಿ. ಇಂಥ ಪ್ರೀತಿಯನ್ನು
Read Moreಜೂನ್ನಿಂದ ವಿವಿವಿಯಲ್ಲಿ ಪರಂಪರಾ ಗುರುಕುಲ ಆರಂಭ: ರಾಘವೇಶ್ವರ ಶ್ರೀ
ಮೆಕಾಲೆ ಪ್ರಣೀತವಲ್ಲದ, ಶುದ್ಧ ಭಾರತೀಯ ಪಾರಂಪರಿಕ ಶಿಕ್ಷಣ ನೀಡುವ ಪರಂಪರಾ ಗುರುಕುಲ ಈ ವರ್ಷದ ಜೂನ್ನಿಂದ ಗೋಕರ್ಣ ಸಮೀಪದ ಅಶೋಕೆಯಲ್ಲಿ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ವತಿಯಿಂದ ಆರಂಭವಾಗಲಿದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಪ್ರಕಟಿಸಿದರು. ಜಾಲ್ಸೂರು ಸಮೀಪದ ಮುರೂರು ಮೀನಗದ್ದೆಯಲ್ಲಿ ನಡೆದ ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಸಂವಾದ ಕಾರ್ಯದಲ್ಲಿ ಪರಮಪೂಜ್ಯರು ಆಶೀರ್ವಚನ ನೀಡಿದರು. ದೇಶದ ಶಿಕ್ಷಣ ವ್ಯವಸ್ಥೆಗಿಂತ ಭಿನ್ನವಾದ ಹೆಜ್ಜೆ ಇದಾಗಿರುತ್ತದೆ. ಮೆಕಾಲೆ ಶಿಕ್ಷಣ ಜಾರಿಗೆ ಬರುವ ಮುನ್ನ ಇದ್ದ ಶಿಕ್ಷಣವನ್ನು ಮರಳಿ ತರುವ
Read Moreಉಕ್ರೇನ್ ಸಂತ್ರಸ್ತ ವಿದ್ಯಾರ್ಥಿಗಳಿಗೆ ರಾಮಚಂದ್ರಾಪುರ ಮಠ ಸಹಾಯಹಸ್ತ
ಬೆಂಗಳೂರು: ಯುದ್ಧಪೀಡಿತ ಉಕ್ರೇನ್ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆ ತರಲು ಭಾರತ ಸರ್ಕಾರ ಆರಂಭಿಸಿದ ‘ಆಪರೇಷನ್ ಗಂಗಾ’ ಕಾರ್ಯಾಚರಣೆಗೆ ಶ್ರೀರಾಮಚಂದ್ರಾಪುರ ಮಠ ಟ್ವಿಟ್ಟರ್ನಲ್ಲಿ ಸಹಾಯವಾಣಿ ಆರಂಭಿಸುವ ಮೂಲಕ ನೆರವು ನೀಡಿರುವುದು ಸಂತ್ರಸ್ತ ವಿದ್ಯಾರ್ಥಿಗಳ ಮತ್ತು ಪೋಷಕರ ಮೆಚ್ಚುಗೆಗೆ ಪಾತ್ರವಾಗಿದೆ. ಉಕ್ರೇನ್ ಮೇಲೆ ಫೆಬ್ರುವರಿ 24ರಂದು ರಷ್ಯಾ ಅತಿಕ್ರಮಣ ನಡೆಸಿದ ಸುದ್ದಿ ಸ್ಫೋಟವಾಗುತ್ತಿದ್ದಂತೆ, ಉಕ್ರೇನ್ನಲ್ಲಿರುವ ಅಪಾರ ಸಂಖ್ಯೆಯ ಶ್ರೀಮಠದ ಶಿಷ್ಯರು, ಕನ್ನಡಿಗ ಹಾಗೂ ಭಾರತೀಯ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆ ತರುವ ಉದ್ದೇಶದಿಂದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ
Read Moreಶಾಂತಿ- ನೆಮ್ಮದಿಗೆ ಶ್ರದ್ಧಾಭಕ್ತಿಯ ಪೂಜೆಯೇ ಸಾಧನ: ರಾಘವೇಶ್ವರ ಶ್ರೀ
ಬೆಂಗಳೂರು: ಇಡೀ ಜಗತ್ತು ಇಂದು ಶಾಂತಿ- ನೆಮ್ಮದಿಗಾಗಿ ಹಪಹಪಿಸುತ್ತಿದ್ದು, ವಿಶ್ವಾದ್ಯಂತ ಜನ ಮನಃಶಾಂತಿಯ ಹುಡುಕಾಟದಲ್ಲಿದ್ದಾರೆ. ಆದರೆ ಶ್ರದ್ಧಾಭಕ್ತಿಯ ಪೂಜೆಯಿಂದ ಪರಮಾನಂದ ಪಡೆಯಬಹುದು ಎಂಬ ಸತ್ಯದರ್ಶನ ಅವರಿಗೆ ಆಗುತ್ತಿಲ್ಲ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀಸ್ವಾಮೀಜಿ ನುಡಿದರು. ರಾಮಚಂದ್ರಾಪುರ ಮಠದ ಶ್ರೀ ಚಂದ್ರಮೌಳೀಶ್ವರ ದೇವಸ್ಥಾನದಲ್ಲಿ ಸೋಮಪ್ರದೋಷದಂದು ಲೋಕ ಹಿತಕ್ಕಾಗಿ ನಡೆದ ಅತ್ಯಪರೂಪದ ಸೋಮ ಸಪರ್ಯಾ ಧರ್ಮಸಭೆಯಲ್ಲಿ ಪರಮಪೂಜ್ಯರು ಸಂದೇಶ ಅನುಗ್ರಹಿಸಿದರು. ಶಿವ ಶೂಲಪಾಣಿಯಾಗಿ ಪ್ರದೋಷದಂದು ಸಂಚಾರ ಮಾಡುತ್ತಾನೆ ಎಂಬ ಪ್ರತೀತಿ ಇದೆ. ಈ ಸಂದರ್ಭ ವಿಶೇಷ ಸಪರ್ಯ ನಡೆದಿದೆ. ರಾಜ್ಯದ
Read Moreಕಪ್ಪು ಚಿನ್ನದಿಂದ ರೈತರಿಗೆ ಆರ್ಥಿಕ ಭದ್ರತೆ: ಕೃಷಿವಿಜ್ಞಾನಿ ಸಲಹೆ
ಗೋಕರ್ಣ: ಕಪ್ಪು ಚಿನ್ನ ಎಂದೇ ಪರಿಗಣಿಸಲಾಗುವ ಕಾಳುಮೆಣಸು ಕೃಷಿಗೆ ಆದ್ಯತೆ ನೀಡುವ ಮೂಲಕ ರೈತರು ಆರ್ಥಿಕ ಭದ್ರತೆ ಕಂಡುಕೊಳ್ಳಲು ಸಾಧ್ಯ ಎಂದು ಕಲ್ಲಿಕೋಟೆಯ ಭಾರತೀಯ ಸಾಂಬಾರ ಬೆಳೆಗಳ ಸಂಶೋಧನಾ ಸಂಸ್ಥೆಯ ನಿವೃತ್ತ ಪ್ರಧಾನ ವಿಜ್ಞಾನಿ ಡಾ,ಎಂ.ಎನ್.ಆರ್.ವೇಣುಪಾಲ್ ಅಭಿಪ್ರಾಯಪಟ್ಟರು. ಶ್ರೀ ರಾಮಚಂದ್ರಾಪುರ ಮಠದ ಗೋಫಲ ಟ್ರಸ್ಟ್, ಶಿರಸಿಯ ತೋಟಗಾರಿಕಾ ಮಹಾವಿದ್ಯಾಲಯ, ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ, ಹವ್ಯಕ ಮಹಾಮಂಡಲ, ಕಾಮದುಘಾ ಟ್ರಸ್ಟ್ ಹಾಗೂ ಭಾರತೀಯ ಗೋ ಪರಿವಾರ ಟ್ರಸ್ಟ್ ಸಂಯುಕ್ತ ಆಶ್ರಯದಲ್ಲಿ ಶನಿವಾರ ಸಂಜೆ ಹಮ್ಮಿಕೊಂಡಿದ್ದ ‘ಕಾಳುಮೆಣಸು
Read Moreಸಿದ್ಧಿಗಾಗಿ ಪ್ರಯತ್ನ ಇರಲಿ, ಪ್ರಸಿದ್ಧಿಗಾಗಿ ಅಲ್ಲ: ರಾಘವೇಶ್ವರ ಶ್ರೀ
ಮಾಲೂರು: ಇಡೀ ಜಗತ್ತು ಇಂದು ಪ್ರಸಿದ್ಧಿಯ ಭ್ರಮೆಯಲ್ಲಿದೆ. ಜೀವನದಲ್ಲಿ ಸಿದ್ಧಿ ಸಾಧಿಸಿದಾಗ ಸಹಜವಾಗಿಯೇ ಪ್ರಸಿದ್ಧಿ ಬರುತ್ತದೆ. ಆದ್ದರಿಂದ ನಮ್ಮೆಲ್ಲರ ಪ್ರಯತ್ನ ಸಿದ್ಧಿಯತ್ತ ಇರಲಿ. ಭಕ್ತನಾಗಿ, ಯೋಗಿಯಾಗಿ ಮತ್ತು ಯೋಧನಾಗಿ ಸಿದ್ಧಿ ಸಾಧಿಸಿದ ಆಂಜನೇಯ ನಮಗೆಲ್ಲರಿಗೆ ಮಾದರಿ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ನುಡಿದರು. ಮಾಲೂರು ಸಮೀಪದ ಗಂಗಾಪುರದ ಶ್ರೀ ರಾಘವೇಂದ್ರ ಗೋ ಆಶ್ರಮ ಆವರಣದಲ್ಲಿ ಜೀರ್ಣೋದ್ಧಾರಗೊಂಡಿರುವ ಶ್ರೀ ಸಿದ್ದಾಂಜನೇಯ ಸ್ವಾಮಿ ದೇವಾಲಯದ ಅಷ್ಟಬಂಧ-ಪುನಃಪ್ರತಿಷ್ಠಾ-ಬ್ರಹ್ಮಕಲಶೋತ್ಸವದ ಧರ್ಮಸಭೆಯ ಸಾನ್ನಿಧ್ಯ ವಹಿಸಿ ಪರಮಪೂಜ್ಯರು ಆಶೀರ್ವಚನ ನೀಡಿದರು. ಯೋಗದ ಸಿದ್ದಿಯ
Read Moreಸೇವೆಯಿಂದ ದಿವ್ಯತೆ, ಪವಿತ್ರತೆ ಪ್ರಾಪ್ತಿ: ರಾಘವೇಶ್ವರ ಸ್ವಾಮೀಜಿ
ಮಂಗಳೂರು: ಮಠಕ್ಕೆ ಭೇಟಿ ನೀಡುವುದೇ ಒಂದು ಪುಣ್ಯಸ್ನಾನ ಇದ್ದಂತೆ. ಸೇವೆ ಸಲ್ಲಿಸುವುದು ಇನ್ನಷ್ಟು ಶ್ರೇಷ್ಠ. ನಮ್ಮ ಜೀವ- ಆತ್ಮವನ್ನು ಶುಚಿಗೊಳಿಸುವಂಥದ್ದು. ದಿವ್ಯತೆ, ಶುದ್ಧತೆ, ಪವಿತ್ರತೆ ನಮಗೆ ಗುರುಸೇವೆಯಿಂದ ಪ್ರಾಪ್ತವಾಗುತ್ತದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಅಭಿಪ್ರಾಯಪಟ್ಟರು. ಮಾಣಿಯ ಪೆರಾಜೆಯಲ್ಲಿರುವ ಶ್ರೀರಾಮಚಂದ್ರಾಪುರ ಮಠದ 49ನೇ ವಾರ್ಷಿಕೋತ್ಸವ ಮತ್ತು ಸೂತ್ರಸಂಗಮ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಪರಮಪೂಜ್ಯರು ಆಶೀರ್ವಚನ ನೀಡಿದರು. ಮಠದ ಕೆಲಸ ಕಾರ್ಯ, ಸೇವೆ ನಮ್ಮ ಜೀವನದ ಸಾರ್ಥಕತೆಗಾಗಿ ಇರುವಂಥದ್ದು. ಅತೀವ ಶಾಂತಿ- ಸಮಾಧಾನವನ್ನು
Read Moreತಮ್ಮತನ ಕಾಯ್ದುಕೊಂಡು ಸಮಗ್ರ ಹಿಂದೂ ಸಮಾಜಕ್ಕೆ ಕೊಡುಗೆ ನೀಡಿ: ರಾಘವೇಶ್ವರ ಶ್ರೀ ಹಿತವಚನ
ಪುತ್ತೂರು: ಹಿಂದೂ ಸಮಾಜದ ಪ್ರತಿಯೊಂದು ಸಮುದಾಯಗಳು ತಮ್ಮ ವೈಶಿಷ್ಯವನ್ನು ಕಾಪಾಡಿಕೊಂಡು ಸಮಗ್ರ ಹಿಂದೂ ಸಮಾಜ ಬೆಳೆಯಲು ಕೊಡುಗೆ ನೀಡಬೇಕು ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಸ್ವಾಮೀಜಿ ನುಡಿದರು. ಪುತ್ತೂರಿನ ಹವ್ಯಕ ಸಭಾಭವನ ಸಮರ್ಪಣಮ್ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ಪರಮಪೂಜ್ಯರು, “ಸಮಾಜದ ಯಾವುದೇ ಸಮುದಾಯಗಳು ತಮ್ಮತನವನ್ನು ಮರೆತರೆ ಹಿಂದೂ ಸಮಾಜಕ್ಕೆ ಅಸ್ತಿತ್ವ ಇಲ್ಲ. ಆಯಾ ಸಮಾಜ ತನ್ನ ವೈಶಿಷ್ಟ್ಯಗಳನ್ನು, ನಡೆ, ನುಡಿ, ಆಚಾರ ವಿಚಾರಗಳನ್ನು ಕಾಪಾಡಿಕೊಂಡು ಬಂದರೆ ಮಾತ್ರ ಹಿಂದೂ ಸಮಾಜ ಎದ್ದು ನಿಲ್ಲಲು ಸಾಧ್ಯ.
Read Moreಹವ್ಯಕ ಸಭಾಭವನ ಉದ್ಘಾಟನೆ
ಶ್ರೀ ಅಖಿಲ ಹವ್ಯಕ ಮಹಾಸಭೆಯಿಂದ ಪುತ್ತೂರಿನಲ್ಲಿ ನೂತನವಾಗಿ ನಿರ್ಮಿಸಿರುವ ‘ಹವ್ಯಕ ಸಭಾಭವನ’ ದ ಉದ್ಘಾಟನಾ ಕಾರ್ಯಕ್ರಮ ಜನವರಿ 2 ಭಾನುವಾರ 11.30 ಕ್ಕೆ ನಡೆಯಲಿದೆ. ಶ್ರೀರಾಮಚಂದ್ರಾಪುರಮಠದ ಗೋಕರ್ಣಮಂಡಲಾಧೀಶ್ವರ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಕಾರ್ಯಕ್ರಮದಲ್ಲಿ ದಿವ್ಯ ಸಾನ್ನಿಧ್ಯವಹಿಸಲಿದ್ದು, ಕೇಂದ್ರ ಮಾಜಿ ಸಚಿವರಾದ ಡಿ.ವಿ ಸದಾನಂದ ಗೌಡ ಸಭಾಭವನವನ್ನು ಉದ್ಘಾಟಿಸಲಿದ್ದಾರೆ. ಅಭ್ಯಾಗತರಾಗಿ ವಿಧಾನ ಸಭಾಧ್ಯಕ್ಷ ವಿಶ್ವೇಶ್ವರಹೆಗಡೆ ಕಾಗೇರಿ, ಸಚಿವರಾದ ಎಸ್ ಅಂಗಾರ, ಸುನಿಲ್ ಕುಮಾರ್, ಸಂಸದ ಹಾಗು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್
Read Moreಭಾವ, ರಾಗ, ತಾಳ ಮೇಳೈಸಿದರೆ ಜೀವನ ಆಹ್ಲಾದಕರ: ರಾಘವೇಶ್ವರ ಶ್ರೀ
ಗೋಕರ್ಣ: ಭಾವ, ರಾಗ, ತಾಳ ಮೇಳೈಸಿದಾಗ ಸಂಗೀತ ಹೇಗೆ ಸುಶ್ರಾವ್ಯವಾಗುವುದೋ ಜೀವನ ಆಹ್ಲಾದಕರ ಆಗಬೇಕಾದರೆ ಮನಸ್ಸು, ಮಾತು ಮತ್ತು ಕೃತಿ ಒಂದಾಗಬೇಕು ಎಂದು ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ನುಡಿದರು. ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ವತಿಯಿಂದ ಶುಕ್ರವಾರ ಅಶೋಕೆಯ ವಿದ್ಯಾವಿಶ್ವ ಸಭಾಂಗಣದಲ್ಲಿ ಆಯೋಜಿಸಿದ್ದ ಭಾವಸಂಗೀತೋತ್ಸವದ ಸಾನ್ನಿಧ್ಯ ವಹಿಸಿ ಪರಮಪೂಜ್ಯರು ಆಶೀರ್ವಚನ ನೀಡಿದರು. ಜೀವನ ಕೂಡಾ ಒಂದು ಸಂಗೀತ. ಜೀವನ ಮುನ್ನಡೆಯಬೇಕಾದರೆ ಅಂದರೆ ಜೀವನದಲ್ಲಿ ‘ಭರತ’ ಬರಬೇಕಾದರೆ ಭಾವ, ರಾಗ ಹಾಗೂ ತಾಳ ಅಗತ್ಯ.
Read Moreಶಾಲೆಗಳು ಪ್ರತೀ ವಿದ್ಯಾರ್ಥಿಯ ಅಂತರಂಗವನ್ನು ನಿರ್ಮಾಣ ಮಾಡುತ್ತದೆ – ರಾಘವೇಶ್ವರಶ್ರೀ
ಧರ್ಮಪರ ಸರಕಾರಗಳು ಎಷ್ಟು ಮುಖ್ಯವೋ ಧರ್ಮಪರ ಶಿಕ್ಷಣ ಸಂಸ್ಥೆಗಳೂ ಅಷ್ಟೇ ಮುಖ್ಯ. ಧರ್ಮ-ಸಂಸ್ಕೃತಿ ಆಧಾರಿತ ಶಿಕ್ಷಣ ದೇಶಕ್ಕೆ ಅಗತ್ಯ.ಸರಕಾರಗಳು ರಸ್ತೆ ಸಹಿತ ಮೂಲಭೂತ ಸೌಕರ್ಯಗಳ ಕುರಿತಂತೆ ಬಹಿರಂಗ ಕಾರ್ಯಗಳನ್ನು ಮಾಡಿದರೆ ಶಾಲೆಗಳು ಪ್ರತೀ ವಿದ್ಯಾರ್ಥಿಯ ಅಂತರಂಗವನ್ನು ನಿರ್ಮಾಣ ಮಾಡುವ ಕೆಲಸವನ್ನು ಮಾಡುತ್ತಿವೆ ಎಂದು ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿ ಹೇಳಿದರು. ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಆಶ್ರಯದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ (ಸಿಬಿಎಸ್ಇ) ಇದರ ನೂತನ ಕಟ್ಟಡ ಉದ್ಘಾಟಿಸಿ ಆಶೀರ್ವಚನ ನೀಡಿದರು.
Read Moreವಿವಿವಿಯಲ್ಲಿ ಎರಡು ದಿನಗಳ ಸಂಗೀತೋತ್ಸವಕ್ಕೆ ತೆರೆ ಸಂಗೀತ ಮೋಕ್ಷಕ್ಕೆ ಸಾಧನ: ರಾಘವೇಶ್ವರ ಶ್ರೀ
ಗೋಕರ್ಣ: ಸಂಗೀತ ಮೋಕ್ಷಕ್ಕೆ ಸಾಧನ; ಇದು ಕೇವಲ ಮನಸ್ಸಿಗೆ ಮುದನೀಡುವ ಸಾಧನವಲ್ಲ. ಸಂಗೀತದ ಮೂಲಕ ಜನತೆ ಮತ್ತು ಜನಾರ್ದನನನ್ನು ಕೂಡಾ ಮೆಚ್ಚಿಸಬಹುದು ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ನುಡಿದರು, ವಿಷ್ಣುಗುಪ್ತ ವಿಶ್ವವಿದ್ಯಾಪೀಠದಲ್ಲಿ ಹಮ್ಮಿಕೊಂಡಿದ್ದ ಎರಡು ದಿನಗಳ ಸಂಗೀತೋತ್ಸವದ ಸಾನ್ನಿಧ್ಯ ವಹಿಸಿದ್ದ ಶ್ರೀಗಳು, “ಸಂಗೀತ ಮೋಕ್ಷಕ್ಕೆ ಸಾಧನ ಎಂದು ಯಾಜ್ಞವಲ್ಕ್ಯ ಸ್ಮøತಿಯಲ್ಲಿ ಹೇಳಲಾಗಿದೆ. ಆದ್ದರಿಂದ ಸಂಗೀತ ಕೇವಲ ಮನೋರಂಜನೆಯಲ್ಲ ಸಾಧನವಲ್ಲ. ಜನರನ್ನು ಮಾತ್ರವಲ್ಲದೇ ಇದರಿಂದ ಜನಾರ್ದನನ್ನೂ ಮೆಚ್ಚಿಸಬಹುದು. ವಿದ್ಯಾರ್ಥಿಗಳು ಮೇರು ಕಲಾವಿದರಿಂದ ಸ್ಫೂರ್ತಿ ಪಡೆದು ಇಂಥ
Read Moreಸಂಗೀತೋತ್ಸವಕ್ಕೆ ಅದ್ದೂರಿ ಚಾಲನೆ: ವಿಷ್ಣುಗುಪ್ತ ವಿವಿಯಲ್ಲಿ ನಾದವೈಭವ
ಗೋಕರ್ಣ: ಅಶೋಕೆಯ ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಆವರಣದಲ್ಲಿ ಬುಧವಾರ ಎರಡು ದಿನಗಳ ಸಂಗೀತೋತ್ಸವಕ್ಕೆ ಖ್ಯಾತ ಸಂಗೀತ ವಿದುಷಿ ವಿ.ಕಾಂಚನ ರೋಹಿಣಿ ಸುಬ್ಬರತ್ನಂ ಚಾಲನೆ ನೀಡಿದರು. ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಯವರು ಸಾನ್ನಿಧ್ಯ ವಹಿಸಿದ್ದರು. ವಿದ್ಯಾರ್ಥಿಗಳಿಗೆ ತಾವು ಇಚ್ಛಿಸಿದ ಪಾರಂಪರಿಕ ಸಂಗೀತ ವಿದ್ಯೆ, ಕಲೆಯನ್ನು ಪ್ರಾತ್ಯಕ್ಷಿಕೆ ಮೂಲಕ ಕಲಿಯಲು ಅವಕಾಶ ಮಾಡಿಕೊಡುವ ದೃಷ್ಟಿಯಿಂದ ಆಯೋಜಿಸಿದ್ದ ಈ ಸಂಗೀತೋತ್ಸವದಲ್ಲಿ ಕರ್ನಾಟಕ ಸಂಗೀತ ಕ್ಷೇತ್ರದ ದಿಗ್ಗಜರಿಂದ ಗುರುಕುಲದ ವಿದ್ಯಾರ್ಥಿಗಳಿಗೆ ಪ್ರಾತ್ಯಕ್ಷಿಕೆ ನಡೆಯಿತು. ವಿದ್ಯಾವಿಶ್ವ ಸಭಾಂಗಣದಲ್ಲಿ ದಿನವಿಡೀ ನಡೆದ ಸಂಗೀತೋತ್ಸವದ ಮೊದಲ
Read Moreಸೀಮೋಲ್ಲಂಘನೆ ಮುಕ್ತಿಗೆ ಸೋಪಾನ: ರಾಘವೇಶ್ವರ ಶ್ರೀ
ಬೆಂಗಳೂರು: ಸೀಮೋಲ್ಲಂಘನೆ ಎಂದರೆ ಆತ್ಮದ ವಿಸ್ತರಣೆ ಮತ್ತು ಮುಕ್ತಿಗೆ ಸೋಪಾನ. ಆತ್ಮವಿಸ್ತಾರವಾಗಿ ಮುಕ್ತಿ ಪಡೆಯುವುದೇ ನಿಜ ಅರ್ಥದ ಸೀಮೋಲ್ಲಂಘನೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀಸ್ವಾಮೀಜಿ ನುಡಿದರು. ಪ್ಲವನಾಮ ಸಂವತ್ಸರದ ವಿಶ್ವವಿದ್ಯಾ ಚಾತುರ್ಮಾಸ್ಯದ ಸೀಮೋಲ್ಲಂಘನೆ ಧರ್ಮಸಭೆಯಲ್ಲಿ ಪಡೀಲು ಮಹಾಬಲೇಶ್ವರ ಭಟ್ ಅವರಿಗೆ ಚಾತುರ್ಮಾಸ್ಯ ಪ್ರಶಸ್ತಿ ಅನುಗ್ರಹಿಸಿ ಶ್ರೀಗಳು ಆಶೀರ್ವಚನ ನೀಡಿದರು. ಮತ್ತೊಬ್ಬರ ದುಃಖ ಪರಿಹರಿಸುವುದು ನಿಜ ಅರ್ಥದ ಸೀಮೋಲ್ಲಂಘನೆ. ಅವರವರ ಕರ್ತವ್ಯವನ್ನು ಮಾಡುವ ಜತೆಗೆ ಕ್ಷೇತ್ರ ವಿಸ್ತಾರ, ಬದುಕಿನ ಆಯಾಮ ವಿಸ್ತರಿಸುವ ಪ್ರಯತ್ನ ಮಾಡಬೇಕು. ಇಡೀ ವಿಶ್ವಕ್ಕೇ ವ್ಯಾಪಿಸುವುದೇ
Read More