|| ಶ್ರೀರಾಮಚಂದ್ರಾಪುರ ಮಠದ ಯೋಚನೆ-ಯೋಜನೆ-ಕಾರ್ಯ-ಕಾರ್ಯಕ್ರಮಗಳ ಸಮಗ್ರ ದರ್ಶನ ||
Menu

ಬದಿಯಡ್ಕ ಶ್ರೀ ಭಾರತೀ ವಿದ್ಯಾಪೀಠದಲ್ಲಿ ನವೀಕರಣಗೊಂಡ ಭೋಜನ ಶಾಲೆ

ಬದಿಯಡ್ಕ: ಶ್ರೀ ಭಾರತೀ ವಿದ್ಯಾಪೀಠದಲ್ಲಿ ಸುಸಜ್ಜಿತ ವ್ಯವಸ್ಥೆಗಳೊಂದಿಗೆ ನವೀಕರಣಗೊಂಡ ‘ಅನ್ನಮಯೀ’ ಭೋಜನ ಶಾಲೆಯಲ್ಲಿ ಗುರುವಾರ ಸಂಜೆ ಹಾಗೂ ಶುಕ್ರವಾರದಂದು ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳು ಜರಗಿತು.

ಕಟ್ಟಡದ ಲೋಕಾರ್ಪಣಾ ಸಮಾರಂಭದ ಪೂರ್ವಭಾವಿಯಾಗಿ ನಡೆದ ಕಾರ್ಯಕ್ರಮಗಳಲ್ಲಿ ಶ್ರೀಮಠದ ಪ್ರಶಾಸನಾಧಿಕಾರಿ ಸಂತೋಷ್ ಹೆಗಡೆ, ವಿತ್ತಾಧ್ಯಕ್ಷರು ಗಣೇಶ ಜೆ.ಎಲ್., ಸುಶಾಸನಾ ಖಂಡದ ಶ್ರೀ ಸಂಯೋಜಕ ಪ್ರವೀಣ ಭೀಮನಕೋಣೆ, ಶಾಲಾ ಆಡಳಿತ ಸಮಿತಿ ಪದಾಧಿಕಾರಿಗಳು, ಸದಸ್ಯರು, ಪೋಷಕರು, ಅಧ್ಯಾಪಕ ವೃಂದದವರು, ಶಾಲಾ ಹಿತೈಶಿಗಳು ಪಾಲ್ಗೊಂಡಿದ್ದರು.